Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ 10 ದಿನ ಉಚಿತ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ತರಬೇತಿ ಶಿಬಿರ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ : ನಗರದ ಚಳ್ಳಕೆರೆ ರಸ್ತೆಯ ಆರ್ಯ ಈಡಿಗ ವಿದ್ಯಾರ್ಥಿ ನಿಲಯದಲ್ಲಿ ನವೆಂಬರ್ 21 ರಿಂದ 30 ರವರೆಗೆ 10 ದಿನಗಳ ಕಾಲ ಪ್ರತಿ ನಿತ್ಯ ಬೆಳಿಗ್ಗೆ 5.30 ರಿಂದ  7 ರವರೆಗೆ ಉಚಿತ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ ಯೋಗ ಸಮಿತಿ, ಯುವ ಭಾರತ್ ಪತಂಜಲಿ ಕಿಸಾನ್ ಸೇವಾ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡ ರಾಜ್ಯೋತ್ಸವ-ಯೋಗ ಉತ್ಸವ ಕಾರ್ಯಕ್ರಮ ನಡೆಯುತ್ತದೆ.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಬಿಎಸ್‍ಟಿ ಜಿಲ್ಲಾಧ್ಯಕ್ಷ ದೇವಾನಂದ ನಾಯ್ಕ್ ವಹಿಸುವರು. ಆರ್ಯ ಈಡಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಜೀವನ್, ನಗರಸಭೆ ಸದಸ್ಯೆ ಎಸ್.ಇ.ತಾರಕೇಶ್ವರಿ, ಪತ್ರಕರ್ತ ಟಿ.ತಿಪ್ಪೇಸ್ವಾಮಿ ಉದ್ಘಾಟನೆ ನೆರವೇರಿಸುವರು.

ಮುಖ್ಯ ಅತಿಥಿಗಳಾಗಿ ಎನ್.ಎ.ವೆಂಕಟೇಶ್ ರೆಡ್ಡಿ, ಹೆಚ್.ಎ.ರವಿ, ಆರ್.ಲೋಕೇಶ್ ರೆಡ್ಡಿ, ಎನ್.ಆರ್.ಗೋವಿಂದರೆಡ್ಡಿ, ಶೋಭಾ ತಿರುಮಲ ರೆಡ್ಡಿ, ಆರ್.ಎ.ಶ್ರೀರಾಮರೆಡ್ಡಿ, ಡಾ.ಕೆ.ಪಿ.ಮಲ್ಲಪ್ಪ, ಡಾ.ಜಿ.ಡಿ.ರಶ್ಮಿ, ಕೆ.ಆರ್.ವಿಜಯಕುಮಾರ್ ಭಾಗವಹಿಸುವರು.

ಯೋಗ ಶಿಕ್ಷಕರಾದ ಜಿ.ಶ್ರೀನಿವಾಸ್, ಎನ್.ಕೆಂಚವೀರಪ್ಪ, ಲಲಿತಾ ಬೇದ್ರೆ ಶಿಬಿರ ನಡೆಸಿಕೊಡುವರು. ಶಿಬಿರಾರ್ಥಿಗಳು ಯೋಗ ತರಬೇತಿಗೆ ಯೋಗ ಮ್ಯಾಟ್ ಅಥವಾ ಜಮಾಖಾನದೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಘಟನಾ ಕಾರ್ಯದರ್ಶಿ ಜೆ.ಎಸ್.ಗುರುಮೂರ್ತಿ ಮೊ-9449145416, ಖಜಾಂಚಿ ನವೀನ್ ಮೊ-9901585905 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ,

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ, ಈ ರಾಶಿಯವರಿಗೆ ಇಷ್ಟವಿಲ್ಲದ ಮದುವೆ, ಸೋಮವಾರ- ರಾಶಿ ಭವಿಷ್ಯ ಡಿಸೆಂಬರ್-11,2023 ಸೂರ್ಯೋದಯ: 06.31 AM, ಸೂರ್ಯಾಸ್ತ : 05.54 PM ಶಾಲಿವಾಹನ ಶಕೆ1944, ಶುಭಕೃತ ನಾಮ

ವಿದ್ಯಾರ್ಥಿಯ ಪರಿಪೂರ್ಣತೆ ಹಾಗೂ ವಿಕಸನಕ್ಕೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಪೂರಕ : ಆರ್. ಪುಟ್ಟಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 10 :  ವಿದ್ಯಾರ್ಥಿಯ ಪರಿಪೂರ್ಣತೆ ಹಾಗೂ ವಿಕಸನಕ್ಕೆ ಪಠ್ಯ ಸಹಿತ ಪಠ್ಯೇತರ ಚಟುವಟಿಕೆಗಳು ಪೂರಕವಾಗುತ್ತವೆ.

ಈ ವಾರ ಬಿಗ್ ಬಾಸ್ ಮನೆಯಿಂದ ಬರ್ತಾ ಯಾರು ಗೊತ್ತಾ..? ಸುದೀಪ್ ಕೊಟ್ಟ ಅವಕಾಶವನ್ನು ಬಳಸಿಕೊಳ್ಳಲಾಗಲಿಲ್ವಾ..?

ಬಿಗ್ ಬಾಸ್ ಸೀಸನ್ 10.. ಈ ವಾರವಂತು ಸಾಕಷ್ಟು ಕಠಿಣವಾಗಿತ್ತು. ಬಿಗ್ ಬಾಸ್ ಏನೋ ನಿರೀಕ್ಷೆ ಮಾಡಿ ಕೊಟ್ಟ ಟಾಸ್ಕ್ ಸಂಪೂರ್ಣವಾಗಿ ಬೇರೆ ರೀತಿಯಾಗಿಯೇ ಟರ್ನ್ ಆಗಿತ್ತು. ರಾಕ್ಷಸರು ಹಾಗೂ ಗಂಧರ್ವರು ಅಂತ ಮಾಡಿದ್ದು

error: Content is protected !!