Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡ್ರೋನ್ ಪ್ರತಾಪ್ ಗೆ 10 ದಿನ ನ್ಯಾಯಾಂಗ ಬಂಧನ : ಮಧುಗಿರಿ ಪೊಲೀಸರ ವಶಕ್ಕೆ..!

---Advertisement---

ತುಮಕೂರು; ಕೃಷಿ ಹೊಂಡದಲ್ಲಿ ಸೋಡಿಯಂ ಎಸೆದು ಸ್ಪೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ಗೆ ನ್ಯಾಯಾಂಗ ಬಂಧನ ವಿಧಿಸಿದೆ. ಹತ್ತು ದಿನಗಳ ಕಾಲ ಅಂದ್ರೆ ಡಿಸೆಂಬರ್ 26ರವರೆಗೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಸಂಬಂಧ ಮಧುಗಿರಿಯ ಜೆಎಂಎಫ್ ಸಿ ನ್ಯಾಯಾಲಯ ಆದೇಶ ನೀಡಿದೆ.

ಡ್ರೋನ್ ಪ್ರತಾಪ್ ಸೋಡಿಯಂನಿಂದ ಹೊಸ ಪ್ರಯೋಗವನ್ನು ಮಾಡುವುದಕ್ಕೆ ಪ್ರಯತ್ನ ಪಟ್ಟಿದ್ದರು. ಕೃಷಿ ಹೊಂಡದಲ್ಲಿ ಸೋಡಿಯಂ ಎಸೆದು ಬ್ಲಾಸ್ಟ್ ಮಾಡಿದರು. ಇಷ್ಟಕ್ಕೆ ಸುಮ್ಮನಾಗದ ಡ್ರೋನ್ ಪ್ರತಾಪ್ ಅದನ್ನು ದೊಡ್ಡ ಸಾಧನೆಯೆಂಬಂತೆ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟರು. ಈ ವಿಡಿಯೋ ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಸಂಬಂಧ ಪೊಲೀಸರಿಗೆ ದೂರು ನೀಡಿದರು. ಮಿಡಿಗೇಶಿ ಪೊಲೀಸರು ಡ್ರೋನ್ ಪ್ರತಾಪ್ ನನ್ನು ಬಂಧಿಸಿ, ಸ್ಥಳ ಮಹಜರು ಕೂಡ ಮಾಡಿದ್ದರು. ಇಂದು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಡ್ರೋನ್ ಪ್ರತಾಪ್ ಹೀಗೆ ಸೋಡಿಯಂ ಬ್ಲಾಸ್ಟ್ ಮಾಡಿದ್ದರಿಂದ ನೀರು ಕಲುಷಿತಗೊಳ್ಳುತ್ತದೆ. ಕುಡಿಯಲು ಯೋಗ್ಯವಾಗಿರುವುದಿಲ್ಲ. ಇದರಿಂದ ಸಮಾಜಕ್ಕೆ ಕೆಟ್ಟ ಸಂದೇಶವೇ ಹೋದಂತೆ ಆಗುತ್ತದೆ. ಯಾಕಂದ್ರೆ ಈಗಂತು ಸೋಷಿಯಲ್ ಮೀಡಿಯಾ ಕ್ರೇಜ್ ದೊಡ್ಡ ಮಟ್ಟಕ್ಕೆ ಇದೆ. ಯಾರೂ ಏನೇ ಮಾಡಿದರು ಇನ್ನೊಂದಷ್ಟು ಜನ ಕ್ರೇಜ್ ಗೆ, ವೀವ್ಸ್ ಗೆ ಅದೇ ರೀತಿ ಕೆಲಸ ಮಾಡುತ್ತಾರೆ. ಡ್ರೋನ್ ಪ್ರತಾಪ್ ಏನೋ ಕೃಷಿ ಹೊಂಡದಲ್ಲಿ ಬ್ಲಾಸ್ಟ್ ಮಾಡಿದರು. ಆದರೆ ಬೇರೊಬ್ಬರು ಕೆರೆ, ಕಟ್ಟೆಗಳಲ್ಲಿ ಬ್ಲಾಸ್ಟ್ ಮಾಡಿದರೆ ಅಲ್ಲಿ ನೀರು ಕುಡಿಯುವ ಪ್ರಾಣಿಗಳ ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿ ಇದು ಸಮಾಜಕ್ಕೆ ಒಳ್ಳೆಯ ಸಂದೇಶ ಅಲ್ಲ ಅನ್ನೋದು ಪರಿಸರವಾದಿಗಳ ಆಕ್ರೋಶವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment