ಬಳ್ಳಾರಿ: ಬ್ಯಾಬರ್ ಗಲಾಟೆಯಲ್ಲಿ ಹಾರಿದ ಗುಂಡಿಗೆ ರಾಜಶೇಖರ್ ಬಲಿಯಾಗಿದ್ದಾರೆ. ಇಡೀ ಕುಟುಂಬಕ್ಕೆ ಆತನೆ ಆಸರೆಯಾಗಿದ್ದ. ಇದೀಗ ಮೃತ ಕುಟುಂಬಕ್ಕೆ ಬಿಜೆಪಿ ನಾಯಕರು ಸಹಾಯ ಮಾಡಿದ್ದಾರೆ. ಮೃತ ರಾಜಶೇಖರ ರೆಡ್ಡಿ ಕುಟುಂಬಕ್ಕೆ ಬಿಜೆಪಿ 10 ಲಕ್ಷ ಪರಿಹಾರ ನೀಡಿದೆ. ಬಳ್ಳಾರಿಯಲಿರುವ ರಾಜಶೇಖರ ರೆಡ್ಡಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಅಶೋಕ್, ಪರಿಷತ್ ಪ್ರತಿಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಬಿ ಶ್ರೀರಾಮುಲು ಸೇರಿದಂತೆ ಬಿಜೆಪಿ ಪ್ರಮುಖರು ರಾಜಶೇಖರ ರೆಡ್ಡಿ ಅವರ ತಾಯಿ ಅವರಿಗೆ ಹತ್ತು ಲಕ್ಷ ರೂಪಾಯಿಯ ಚೆಕ್ ಅನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದರು.
ಇತ್ತೀಚಿಗೆ ರಾಜಶೇಖರ್ ರೆಡ್ಡಿ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ನೇತೃತ್ವದ ಕಾಂಗ್ರೆಸ್ ನಿಯೋಗ 25 ಲಕ್ಷ ರೂ ಪರಿಹಾರವನ್ನು ಕೆಪಿಸಿಸಿ ವತಿಯಿಂದ ನೀಡಿತ್ತು. ಇದರ
ಬೆನ್ನಲ್ಲೇ, ಬಿಜೆಪಿ ಕೂಡ 10 ಲಕ್ಷ ರುಪಾಯಿ ಪರಿಹಾರ ನೀಡಿರುವುದು ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ರಾಜಶೇಖರ್ ರೆಡ್ಡಿ ತಾಯಿ, ಅವರ ಸಹೋದರ, ಮತ್ತು ಸಹೋದರಿ ಸೇರಿದಂತೆ ಕುಟುಂಬದವರನ್ನು ಬಿಜೆಪಿ ನಾಯಕರು ಭೇಟಿ ಮಾಡಿ ಸಾಂತ್ವಾನ ಹೇಳಿದರು. ಜೊತೆಗೆ ಅವರಿಗೆ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸುವ ಭರವಸೆಯನ್ನು ನೀಡಿದರು. ಮಗನ ಸಾವಿನ ದುಃಖದಿಂದ ಹೊರಗೆ ಬರಲಿ, ಆ ದೇವರು ನಿಮ್ಮ ಮಗನ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








