ಶಿಥಿಲಾವಸ್ಥೆ ತಲುಪಿದ ಶತಮಾನದ ಶಾಲೆ : ಹೊರಗಡೆಯೇ ನಡೆಯುತ್ತಿದೆ ಪಾಠ-ಪ್ರವಚನ..!

ಸುದ್ದಿಒನ್, ಚಿತ್ರದುರ್ಗ, (ಅ.26) : ಒಂದು ಕಡೆ ಶಾಲೆ ತೆರೆದ ಖುಷಿ.. 20 ತಿಂಗಳ ಬಳಿಕ ಶಾಲೆ ಆರಂಭವಾಗಿದೆ. ಆದ್ರೆ ಅಲ್ಲೊಂದು ಶಾಲೆಯಲ್ಲಿ ಆ ಖುಷಿ ಮಕ್ಕಳಲ್ಲೂ ಇಲ್ಲ.. ಶಿಕ್ಷಕರಿಗೂ ಇಲ್ಲ. ಯಾಕಂದ್ರೆ ಆ ಶಾಲೆಯಲ್ಲಿ ಹೇಳಿಕೊಳ್ಳುವಂತ ಸೌಲಭ್ಯವಿಲ್ಲ. ಶಿಥಿಲಾವಸ್ಥೆ ತಲುಪಿದ ಕಾರಣ, ಹೊರಗಡೆಯೆ ನಡೆಯುತ್ತಿದೆ ಪಾಠ-ಪ್ರವಚನ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಓಬಳಾಪುರ ಸಮೀಪದ ಸಿರಿವಾಳ ಎಂಬಲ್ಲಿ ಈ ಸರ್ಕಾರಿ ಶಾಲೆ ಇದೆ. ಶತಮಾನದಷ್ಟು ಹಳೆಯದಾದ ಶಾಲೆ ಇದೀಗ ಅವ್ಯವಸ್ಥೆಯ ಆಗರವಾಗಿದೆ. ಈ ಶಾಲೆಯಲ್ಲಿ ಸುಮಾರು 270 ಮಕ್ಕಳು ಓದುತ್ತಿದ್ದಾರೆ. ಸುತ್ತಮುತ್ತಲಿನ ಗ್ರಾಮದ ಮಕ್ಕಳೆಲ್ಲಾ ಇದೇ ಶಾಲೆಗೆ ಬರುತ್ತಾರೆ. ಆದ್ರೆ ಶಿಥಿಲಾವಸ್ಥೆ ತಲುಪಿದ್ರು ಸಹ, ಶಾಲೆಯ ದುರಸ್ತಿಗೆ ಸರ್ಕಾರ ತಲೆಕೆಡಿಸಿಕೊಂಡಂತಿಲ್ಲ.

ಶಾಲೆ ನೂರು ವರ್ಷ ದಾಟಿದೆ. ಹೀಗಾಗಿ ಕೊಠಡಿಯೆಲ್ಲಾ ಹಾಳಾಗಿವೆ. ಮೇಲ್ಛಾವಣಿಯ ಹೆಂಚುಗಳು ಸರಿಯಾಗಿ ಇಲ್ಲ. ಮಳೆ ಗಾಳಿಗೆ ಹಾರಿ ಹೋಗಿದ್ದು, ಮಳೆ ಬಂದಾಗ ಸೋರುತ್ತೆ,  ಬಿಸಿಲಾದಾಗ ಸುಡುತ್ತೆ. ಕಿಟಕಿ – ಬಾಗಿಲು ಮುರಿದಿದೆ, ಗೋಡೆ ಕುಸಿದಿದೆ. ಹೀಗಾಗಿ ಬಯಲಲ್ಲೆ ಕುಳಿತು ಶಿಕ್ಷಕರು ಪಾಠ ಮಾಡುತ್ತಿದ್ದಾರೆ.

1 ರಿಂದ 8 ನೇ ತರಗತಿಯವರೆಗೆ ಈ ಶಾಲೆಯಲ್ಲು ತರಗತಿಗಳು ನಡೆಯಲಿವೆ. ಗ್ರಾಮಸ್ಥರು ಸಾಕಷ್ಟು ಬಾರಿ ಜಿಲ್ಲಾಧಿಕಾರಿಗಳಿಗೆ, ಶಿಕ್ಷಣ ಇಲಾಖೆಗೆ, ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ರು ಸಹ ಯಾವುದೇ ಪ್ರಯೋಜನವಾಗಿಲ್ಲ. ಶೌಚಾಲಯವೂ ಇಲ್ಲ.. ಮಕ್ಕಳಿಗೆ ತಕ್ಕ ಹಾಗೇ ಶಿಕ್ಷಕರು‌ ಇಲ್ಲ. ಈ ಎಲ್ಲಾ ಸಮಸ್ಯೆಗಳನ್ನ ಕೇಳಿಸಿಕೊಂಡರು ಕೇಳದೆ ಇದ್ದಾರೆ ಸಂಬಂಧಪಟ್ಟವರು.

20 ತಿಂಗಳಿಂದ ಮಕ್ಕಳು ಶಾಲೆಯ ಮುಖವನ್ನೇ ನೋಡಿಲ್ಲ. ಶಿಕ್ಷಣ ಸರಿಯಾದ ರೀತಿಯಿಲ್ಲದೆ ಮಕ್ಕಳ ಶೈಕ್ಷಣಿಕ ವರ್ಷವೂ ಹಾಳಾಗಿದೆ. ಹೇಗೋ ಕೊರೊನಾ ಎಲ್ಲಾ ಕಳೆದು ಮಕ್ಕಳು ಮತ್ತೆ ಶಾಲೆಗೆ ಬರುವಂತಾಗಿದೆ. ಈಗಲಾದರೂ ಸಂಬಂಧಪಟ್ಟವರು ಆ ಶಾಲೆಯ ವ್ಯವಸ್ಥೆಯನ್ನ ಸರಿ ಮಾಡಿದ್ರೆ, ಒಂದಷ್ಟು ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಲಿದೆ ಅನ್ನೋದು ಗ್ರಾಮಸ್ಥರ ಅಭಿಪ್ರಾಯವಾಗಿದೆ.

suddionenews

Recent Posts

ಬೆಂಡೆಕಾಯಿ – ನಿಂಬೆ ರಸದ ಅದ್ಭುತ ಆರೋಗ್ಯ ಪ್ರಯೋಜನಗಳೇನು ಗೊತ್ತಾ ?

ಸುದ್ದಿಒನ್ : ಬೆಳಿಗ್ಗೆ ಬೆಂಡೆಕಾಯಿ-ನಿಂಬೆ ರಸ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಬೆಂಡೆಕಾಯಿಯಲ್ಲಿರುವ ಫೈಬರ್, ನಿಂಬೆ ರಸದಲ್ಲಿರುವ ವಿಟಮಿನ್ ಸಿ…

3 hours ago

ಈ ರಾಶಿಯವರು ಎಷ್ಟೇ ಮನೆ ಬದಲಾಯಿಸಿದರು ಅದೃಷ್ಟ ಕೈಹಿಡಿಯಲಿಲ್ಲ

ಈ ರಾಶಿಯ ಇಷ್ಟಪಟ್ಟವರ ಮನಸ್ಸು ಚಂಚಲ ಈ ರಾಶಿಯವರು ಎಷ್ಟೇ ಮನೆ ಬದಲಾಯಿಸಿದರು ಅದೃಷ್ಟ ಕೈಹಿಡಿಯಲಿಲ್ಲ , ಸೋಮವಾರದ ರಾಶಿ…

4 hours ago

ಸುಳ್ಳಾದ ಐಐಟಿ ಬಾಬಾ ಭವಿಷ್ಯವಾಣಿ : ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಖಂಡನೆ

  ಸುದ್ದಿಒನ್ ಮಹಾ ಕುಂಭ ಮೇಳದಿಂದ ಪ್ರಸಿದ್ಧರಾದ ಐಐಟಿ ಬಾಬಾ ಈಗ ಇಂಟರ್ನೆಟ್ ಸೆನ್ಸೇಶನ್. ಅವರ ಸಂದರ್ಶನಗಳು ಮತ್ತು ಪಾಡ್‌ಕಾಸ್ಟ್‌ಗಳ…

11 hours ago

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

11 hours ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

12 hours ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

12 hours ago