Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿಕ್ಕಮಗಳೂರಿನ‌ಮತ್ತೊಂದು ಶಾಲೆಯಲ್ಲಿ ಕೊರೊನಾ ಸ್ಪೋಟ : 11 ಜನರಿಗೆ ಕೊರೊನಾ..!

Facebook
Twitter
Telegram
WhatsApp

ಚಿಕ್ಕಮಗಳೂರು: ದಿನೇ ದಿನೇ ಮಕ್ಕಳಲ್ಲಿ ಕೊರೊನಾ ಹೆಚ್ಚಾಗುತ್ತಿರುವುದು ಭಯದ ವಾತಾವರಣವನ್ನ ಸೃಷ್ಟಿ ಮಾಡಿದೆ. ಮಕ್ಕಳನ್ನ ಶಾಲೆಗೆ ಕಳುಹಿಸಬೇಕಾ ಅಥವಾ ಮತ್ತೆ ಆನ್ಲೈನ್ ಮೊರೆ ಹೋಗುವುದಾ ಎಂಬ ಗೊಂದಲದಲ್ಲಿದ್ದಾರೆ. ಈ ಮಧ್ಯೆ ಶಾಲೆಗಳಲ್ಲೇ ಕೊರೊನಾ ಹೆಚ್ಚಾಗುತ್ತಿದೆ.

ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ ಕೊರೊನಾ ಹೆಚ್ಚಾಗಿದೆ. ಈ ಶಾಲೆ ಒಂದರಲ್ಲೇ 11 ಜನರಿಗೆ ಕೊರೊನಾ ದೃಢವಾಗಿದೆ. ಒಂದೇ ಶಾಲೆಯಲ್ಲಿ 10 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಆಗಿದೆ. ಅದರಲ್ಲಿ ಒಬ್ಬ ವಿದ್ಯಾರ್ಥಿಯಲ್ಲೂ ಸೋಂಕು ಕಾಣಿಸಿಕೊಂಡಿದೆ.

ಇದು ಸಹಜವಾಗಿಯೇ ಇನ್ನುಳಿದ ಶಿಕ್ಷಕರು, ವಿದ್ಯಾರ್ಥಿಗಳಿಗೆ ಸೋಂಕಿನ ಭಯ ಕಾಡೋದಕ್ಕೆ ಶುರು ಮಾಡಿದೆ. ಈಗಾಗಲೇ ಸೋಂಕಿತರನ್ನ ಅವರವರ ಮನೆಗಳಲ್ಲೇ ಐಸೋಲೇಷನ್ ಮಾಡಲಾಗಿದೆ. ಶಾಲೆಯಲ್ಲಿ ಟೆಸ್ಟ್ ಮುಂದುವರೆದಿದ್ದು, ಒಂದು ವಾರಗಳ ಕಾಲ ಶಾಲೆ ಸೀಲ್ಡೌನ್ ಮಾಡಲು ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ. ಇನ್ನು ಇತ್ತೀಚೆಗಷ್ಟೇ ಸಿಗೋಡಿನ ನವೋದಯ ಶಾಲೆಯಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!