ಸುದ್ದಿಒನ್, ಹಿರಿಯೂರು, ನವೆಂಬರ್. 04 : ತಾಲ್ಲೂಕಿನ ಸಕ್ಕರ ಗ್ರಾಮದಿಂದ ಕುರಿಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಕೇವಲ 24 ಗಂಟೆಗಳ ಒಳಗೆ ಪತ್ತೆಮಾಡಿ ಆರೋಪಿಯನ್ನು ಬಂಧಿಸುವಲ್ಲಿ ಅಬ್ಬಿನಹೊಳೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಶಿರಾ ತಾಲ್ಲೂಕಿನ ದ್ವಾರನಕುಂಟೆ ಗ್ರಾಮದ 35 ವರ್ಷದ ಲಕ್ಷ್ಮೀಕಾಂತ ಬಂಧಿತ ಆರೋಪಿ. ತಾಲ್ಲೂಕಿನ ಸಕ್ಕರ ಗ್ರಾಮದ ಗುಂಡಪ್ಪ ಎಂಬುವವರ ಜಮೀನಿನಲ್ಲಿದ್ದ ಕುರಿ ರೊಪ್ಪದಿಂದ ಸುಮಾರು 9 ಲಕ್ಷದ 92 ಸಾವಿರ ರೂಪಾಯಿ ಬೆಲೆಬಾಳುವ 120 ಕುರಿಗಳನ್ನು ಇದೇ ನವೆಂಬರ್ 01 ರಂದು ರಾತ್ರಿ 09-00 ಗಂಟೆಯ ವೇಳೆಯಲ್ಲಿ ಕದ್ದೊಯ್ದಿದ್ದ. ಈ ಕುರಿತು ನವೆಂಬರ್ 03 ರಂದು ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆಗಿಳಿದ ಅಬ್ಬಿನಹೊಳೆ ಪೊಲೀಸರು ಕಳ್ಳತನ ಮಾಡಿದ್ದ ಆರೋಪಿಯ ಜಾಡನ್ನು ಯಶಸ್ವಿಯಾಗಿ ಭೇದಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಚಿತ್ರದುರ್ಗ ಎಸ್.ಪಿ. ರಂಜಿತ್ ಕುಮಾರ್ ಬಂಡಾರು, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶಿವಕುಮಾರ ಕೆ.ಎಸ್ ಪಿಎಸ್, ಹಿರಿಯೂರು ಪೊಲೀಸ್ ಉಪಾಧೀಕ್ಷಕರಾದ ಶಿವಕುಮಾರ್ ರವರ ಮಾರ್ಗದರ್ಶನದಲ್ಲಿ ಐಮಂಗಲ ವೃತ್ತ ನಿರೀಕ್ಷಕರಾದ ಗುಡ್ಡಪ್ಪ ಎನ್ ಹಾಗೂ ಅಬ್ಬಿನಹೊಳೆ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರವರಾದ ದೇವರಾಜ್, ಪ್ರೊ. ಪಿಎಸ್ಐ ಹುಸೇನ್ ಅ ಸುಳಿಕೇರಿ ಮತ್ತು ಸಿಬ್ಬಂದಿಯವರಾದ ಎಎಸ್ಐ ರಾಮಣ್ಣ ಹಾಗೂ ನಿಂಗರಾಜ್, ದೇವೇಂದ್ರಪ್ಪ, ಹಳೆಯಳನಾಡು ನಾಗರಾಜ್, ಹಿರಿಯೂರು ಗ್ರಾಮಾಂತರ ಠಾಣೆಯ ಸಿದ್ದಲಿಂಗೇಶ್ವರ, ಬಬ್ಬೂರು ನಾಗರಾಜ್, ದಿಲೀಪ್, ರುದ್ರೇಶ್, ನಾಗಣ್ಣ ಹಾಗೂ ಚಾಲಕರಾದ ಹರ್ಷ ರವರುಗಳು ಕಾರ್ಯಾಚರಣೆ ನಡೆಸಿ ಆಪಾದಿತನನ್ನು ಕುರಿಗಳೊಂದಿಗೆ ಬಂಧಿಸಿ ಬಡ ರೈತನಿಗೆ ನ್ಯಾಯ ಒದಗಿಸಿದ ಕಾರ್ಯವನ್ನು ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಷಿಸಿರುತ್ತಾರೆ.
