ಚಿತ್ರದುರ್ಗ ನಗರಕ್ಕೆ ಫೆಬ್ರವರಿ 12 ರಿಂದ 14 ರವರೆಗೆ ಶಾಂತಿಸಾಗರ ನೀರು ಸರಬರಾಜು ಸ್ಥಗಿತ

0 Min Read

 

ಸುದ್ದಿಒನ್, ಚಿತ್ರದುರ್ಗ. ಫೆ.09 : ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಕುಟ್ಟಿಗೆಹಳ್ಳಿ ಪಂಪ್‍ಹೌಸ್‍ನಿಂದ ಚಿತ್ರದುರ್ಗ ನಗರದವರೆಗೆ ಮಾರ್ಗ ಮಧ್ಯದಲ್ಲಿ ಮುಖ್ಯ ಕೊಳವೆ ಮಾರ್ಗದ ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ಇದೇ ಫೆ.12 ರಿಂದ 14ರವರೆಗೆ ಶಾಂತಿಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡುಯುವ ನೀರನ್ನು ಉಪಯೋಗಿಸಬೇಕು ಹಾಗೂ ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ. ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *