ಸುದ್ದಿಒನ್, ಚಿತ್ರದುರ್ಗ, ಜೂ.11 : ರೇಣುಕಾಸ್ವಾಮಿ ಕೊಲೆಗೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹದಿಮೂರು ಆರೋಪಿಗಳನ್ನು ಕೋರ್ಟ್ ನತ್ತ ಕರೆದುಕೊಂಎಉ ಹೊರಟಿದ್ದಾರೆ. ಮೊದಲಿಗೆ ಎಲ್ಲರಿಗೂ ಮೆಡಿಕಲ್ ಚೆಕಪ್ ಮಾಡಿಸಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಲಾಗಿತ್ತು. ಇದೀಗ ಕೋರ್ಟ್ ನತ್ತ ಕೃದುಕೊಂಡು ಹೋಗಿದ್ದಾರೆ.
ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಈ ವೇಳೆ ಬೆಂಗಳೂರು ಪೊಲೀಸರು ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಬೌರಿಂಗ್ ಆಸ್ಪತ್ರೆ ಬಳಿಯೂ ಬಿಗಿ ಭದ್ರತೆಯೊಂದಿಗೆ ಮೆಡಿಕಲ್ ಚೆಕಪ್ ಮಾಡಲಾಗಿತ್ತು. ಇದೀಗ ಕೋರ್ಟ್ ಆವರಣದಲ್ಲೂ ಪೊಲೀಸರಿಂದ ಬಿಗಿ ಭದ್ರತೆ ಮಾಡಲಾಗಿದೆ.

ರೇಣುಕಾ ಸ್ವಾಮಿ ಮೃತದೇಹದ ಮರಣೋತ್ತರ ಪರೀಕ್ಷೆ ಕೂಡ ಮುಗಿದಿದೆ. ಈಗಾಗಲೇ ಮೃತದೇಹ ಚಿತ್ರದುರ್ಗದತ್ತ ರವಾನೆಯಾಗಿದ್ದು, ಇಂದು ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ. ರೇಣುಕಾ ಸ್ವಾಮಿ ಊರಿನಲ್ಲಿ ಅಂತ್ಯ ಕ್ರಿಯೆಗೆ ಈಗಾಗಲೇ ಎಲ್ಲಾ ತಯಾರಿ ಕೂಡ ನಡೆದಿದೆ.
ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂಬ ಕಾರಣಕ್ಕೆ ಕರೆದು ಕೊಲೆಯನ್ನೇ ಮಾಡಿಬಿಟ್ಟಿದ್ದಾರೆ. ಕೊಲೆ ಮಾಡಿದ ಮೇಲೂ ಮೋರಿಯಲ್ಲಿ ಬಿಸಾಡಿದ ದರ್ಶನ್ ಸ್ನೇಹಿತರ ಧೈರ್ಯ ಮೆಚ್ಚಲೇಬೇಕಾಗಿದೆ. ಪೊಲೀಸರ ತನಿಖೆಯ ರೀತಿಗೆ ದರ್ಶನ್ ಹಾಗೂ ಪವಿತ್ರಾ ಅವರು ಅಲ್ಲಿಯೇ ಇದ್ದರು ಎಂಬ ವಿಚಾರವನ್ನು ಬಾಯ್ಬಿಟ್ಟಿದ್ದಾರೆ. ಈ ಬಗ್ಗೆ ಕೋರ್ಟ್ ನಲ್ಲಿ ಯಾವ ರೀತಿಯ ವಾದ-ವಿವಾದ ನಡೆಯುತ್ತೆ, ಸತ್ಯಾಸತ್ಯತೆ ಒಪ್ಪಿಕೊಳ್ಳುವ ಆಧಾರದ ಮೇಲೆ ಶಿಕ್ಷೆಯ ಪ್ರಮಾಣವೂ ಗೊತ್ತಾಗಲಿದೆ. ಪೊಲೀಸರು ತನಿಖೆಗಾಗಿ ಕಸ್ಟಡಿಗೂ ಕೇಳಬಹುದು. ಕೋರ್ಟ್ ನಲ್ಲಿ ನೀಡುವ ತೀರ್ಮಾನದ ಬಳಿಕವೇ ಮುಂದಿನ ವಿಚಾರ ತಿಳಿಯಲಿದೆ. ಈಗಾಗಲೇ ದರ್ಶನ್ ಅವರು ಅಭಿಮಾನಿಗಳು ಪೊಲೀಸ್ ಸ್ಟೇಷನ್ ಮುಂದೆ ಜೈಕಾರ ಹಾಕುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










