Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

13 ದಿನಗಳ ಉಚಿತ ಯೋಗ ಮತ್ತು ಪ್ರಾಣಾಯಾಮ ತರಬೇತಿ ಬೇಸಿಗೆ ಶಿಬಿರ

Facebook
Twitter
Telegram
WhatsApp

ಚಿತ್ರದುರ್ಗ,(ಜೂನ್.13) : ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್ ಮಹಿಳಾ ಪತಂಜಲಿ ಯೋಗ ಸಮಿತಿ, ಯುವ ಭಾರತ್, ಪತಂಜಲಿ ಕಿಸಾನ್ ಸೇವಾ ಸಮಿತಿ, ಪತಂಜಲಿ ಚಿಕಿತ್ಸಾಲಯ, ಯೋಗ ಋಷಿ ಪ.ಪೂ.ಶ್ರದ್ಧೆಯ ಸ್ವಾಮಿ ಬಾಬಾ ರಾಮದೇವಜಿ ಮಹಾರಾಜರ ಪ್ರೇರಣೆಯಿಂದ ಚಿತ್ರದುರ್ಗ ಜಿಲ್ಲಾ ಬಿ.ಎಸ್.ಟಿ. ಅಧ್ಯಕ್ಷರಾದ ಮಲ್ಲಿಕಾರ್ಜುನಪ್ಪ ಅವರ ಮಾರ್ಗದರ್ಶನದಲ್ಲಿ 13 ದಿನಗಳ ಕಾಲ ಉಚಿತ ಯೋಗ ಮತ್ತು ಪ್ರಾಣಾಯಾಮ ತರಬೇತಿ ಶಿಬಿರವನ್ನು ಜೂನ್ 14 ರಿಂದ 26 ರವರೆಗೆ ಬೆಳಿಗ್ಗೆ 5.30 ರಿಂದ 7 ಗಂಟೆಯವರೆಗೆ ಚಿತ್ರದುರ್ಗ ನಗರದ ವಿ.ಪಿ.ಬಡಾವಣೆಯ ಗಣೇಶ ದೇವಸ್ಥಾನದ ಹತ್ತಿರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.

ಜೂನ್ 14ರಂದು ಬೆಳಿಗ್ಗೆ 5.30 ರಿಂದ 7 ರವರೆಗೆ ಚಿತ್ರದುರ್ಗ ನಗರದ ಜೆ.ಸಿ.ಆರ್. ಬಡವಾಣೆಯ ನಗರಸಭೆ ಸದಸ್ಯೆ ರೋಹಿಣಿ ನವೀನ್ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಭಾರತ ಸ್ವಾಭಿಮಾನ ಟ್ರಸ್ಟ್ ಅಧ್ಯಕ್ಷರಾದ ದೇವಾನಂದ್ ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನಗರದ ನೀಲಾದ್ರಿ ಪೆಟ್ರೋಲ್ ಬಂಕ್‍ನ ಟಿ.ಕೆ. ಮೀರಾ, ಹಿರಿಯೂರು ತಾ.ಪಂ. ಕಾರ್ಯನಿರ್ವಹಕ ಅಧಿಕಾರಿ ಬಿ.ಎಲ್. ಈಶ್ವರ ಪ್ರಸಾದ್, ಜೆ.ಸಿ.ಆರ್. ಬಡವಾಣೆಯ ನಗರಸಭೆ ಮಾಜಿ ಸದಸ್ಯ ರವಿಶಂಕರ್ ಬಾಬು ಮುಂತಾದವರು ಭಾಗವಹಿಸಲಿದ್ದಾರೆ.

ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಯೋಗ ಶಿಕ್ಷಕರಾದ ಆರ್.ಓಬಳೇಶ್, ಮಂಜುಳಾ ಅವರು ಶಿಬಿರ ನಡೆಸಿಕೊಡುವರು. ಹೆಚ್ಚಿನ ಮಾಹಿತಿಗಾಗಿ 9449858889, 08194-223196 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!