Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಬ್ಬದ ಪ್ರಯುಕ್ತ ಏರ್ಪಡಿಸಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ 15 ಯುವಕರು ಗಂಭೀರ..!

---Advertisement---

ಆಂಧ್ರಪ್ರದೇಶ: ಇವತ್ತು ಮಕರ ಸಂಕ್ರಾಂತಿ ಹಬ್ಬ. ಎಲ್ಲೆಡೆ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಈ ಹಬ್ಬದಂದು ಕೆಲವೊಂದು ಕಡೆ ಕೆಲವೊಂದು ಆಚರಣೆಗಳನ್ನು ಮಾಡಲಾಗುತ್ತದೆ. ಆಂಧ್ರಪ್ರದೇಶದಲ್ಲಿ ಹಬ್ಬದ ಪ್ರಯುಕ್ತ ಜಲ್ಲಿಕಟ್ಟು ಸ್ಪರ್ಧೆ ಏರ್ಪಡಿಸಲಾಗಿತ್ತು. ಆದರೆ ಅದರಿಂದ ಯುವಕರು ಪ್ರಾಣಕ್ಕೆ ಸಂಚಕಾರ ತಂದುಕೊಂಡಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಏರ್ಪಡಿಸಲಾಗಿತ್ತು. ಅದ್ಧೂರಿ ಆಚರಣೆಯಲ್ಲಿ ಗೂಳಿ ಹಿಡಿಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಚಿತ್ತೂರಿನ ಜನತೆ ನೋಡಲು ಉತ್ಸುಕರಾಗಿದ್ದರೆ, ಯುವಕರು ಗೂಳಿ ಹಿಡಿಯಲು ಉತ್ಸುಕರಾಗಿದ್ದರು. ಸ್ಪರ್ಧೆ ಆರಂಭವಾಯಿತು, ಯುವಕರು ಗೂಳಿ ಹಿಡಿಯಲು ಶುರು ಮಾಡಿದರು.

ಆದರೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹದಿನೈದು ಯುವಕರು ಗಂಭೀರ ಸ್ಥಿತಿ ತಲುಪಿದ್ದಾರೆ.‌ ರಭಸವಾಗಿ ಬರುತ್ತಿದ್ದಂತ ಗೂಳಿಗಳು ಯುವಕರನ್ನು ಗುದ್ದಿಕೊಂಡು ಹೋಗಿವೆ. ಸದ್ಯ ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ. ತಮಿಳುನಾಡಿನಲ್ಲಿ ಸಂಕ್ರಾಂತಿ ಸಂಭ್ರಮದ ಜೊತೆಗೆ ಜಲ್ಲಿಕಟ್ಟು ಸ್ಪರ್ಧೆ ಕೂಡ ಶುರುವಾಗುತ್ತೆ. ಇವತ್ತಿನಿಂದ ಮೂರು ದಿನಗಳ ಕಾಲ ನಡೆಯುವ ಈ ಸ್ಪರ್ಧೆಯಲ್ಲಿ 800 ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...