Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸರ್ಕಾರಿ ನೌಕರರ ಸಂಬಳ 17% ಹೆಚ್ಚಳ : ಪ್ರತಿಭಟನಾ ನೌಕರರಿಗೆ ಸಿಎಂ ಭರವಸೆ..!

---Advertisement---

 

 

ಬೆಂಗಳೂರು: 7ನೇ ವೇತನ ಆಯೋಗ ವರದಿ ಜಾರಿಗೆ ತರಲು ಒತ್ತಾಯಿಸಿ ಸರ್ಕಾರಿ ನೌಕರರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸಭೆಗಳ ಮೇಲೆ ಸಭೆ ನಡೆಸಿದ ಬಳಿಕ ಇದೀಗ ಸಿಎಂ ಬೊಮ್ಮಾಯಿ ಅವರು ಮಣಿದಿದ್ದಾರೆ. ಸಂಬಳ ಹೆಚ್ಚಳ ಮಾಡಲು ಒಪ್ಪಿದ್ದಾರೆ.

ನೌಕರರ ಜೊತೆಗೆ ಸರಣಿ ಸಭೆ ನಡೆಸಿದ ಸಿಎಂ ಬೊಮ್ಮಾಯಿ ಇದೀಗ 17% ರಷ್ಟು ಸಂಬಳ ಜಾಸ್ತಿ ಮಾಡಲು ಒಪ್ಪಿದ್ದಾರೆ. ಉಳಿದಂತೆ NPS ಬೇಡಿಕೆ ಪರಾಮರ್ಶೆ ಮಾಡ್ತೇವೆ. ACS ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸುತ್ತೇವೆ. ಬೇರೆ ರಾಜ್ಯಗಳಲ್ಲಿ NPS ಯಾವ ರೀತಿ ಇದೆ ಅಂತ ಅಧ್ಯಯನ ನಡೆಸಿ ವರದಿ ಕೊಡಲು ಸೂಚಿಸುತ್ತೇವೆ ಎಂದಿದ್ದಾರೆ.

ಕೆಲಸ ಹೋದರೂ ಸರಿ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ನೌಕರರ ಅಧ್ಯಕ್ಷ ಷಡಕ್ಷರಿ ಹೇಳಿದ್ದರು. ಇದಾದ ಬಳಿಕ ಸಿಎಂ ಬೊಮ್ಮಾಯಿ ಅವರು ಎರಡನೇ ಸುತ್ತಿನ ಮಾತುಕತೆ ನಡೆಸಿದ್ದರು. ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡಲ್ಲ ಎಂಬುದನ್ನು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment