Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ 18 ಬಸ್ ಗಳಿಗೆ ಬೆಂಕಿ : ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸಲು ಹರಸಾಹಸ..!

Facebook
Twitter
Telegram
WhatsApp

ಬೆಂಗಳೂರು: ಒಂದಲ್ಲ ಎರಡಲ್ಲ ಹದಿನೆಂಟು ಬಸ್ ಗಳು ಹೊತ್ತಿ ಉರೊದಿರುವ ಘಟನೆ ಬೆಂಗಳೂರಿನ ವೀರಭದ್ರ ನಗರದಲ್ಲಿ ನಡೆದಿದೆ. ಹದಿನೆಂಟು ಬಸ್ ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರದಾಹಸ ಪಟ್ಟಿದ್ದು, ಸದ್ಯ ಬೆಂಕಿ ನಂದಿದೆ. ಆದರೆ ಬಸ್ ಗಳೆಲ್ಲ ಭಸ್ಮವಾಗಿದೆ.

 

ವೀರಭದ್ರ ನಗರದಲ್ಲಿ ಎಸ್ ವಿ ಕೋಚ್ ಎಂಬ ಗ್ಯಾರೇಜ್ ಇದೆ. ಈ ಗ್ಯಾರೇಜ್ ಅನ್ನು ಹಲವು ವರ್ಷಗಳಿಂದ ಶ್ರೀನಿವಾಸ್ ಎಂಬುವವರು ನಡೆಸಿಕೊಂಡು ಬರುತ್ತಿದ್ದಾರೆ. ಇದರ ಒಳಗೆ ಕಟ್ಟಿಂಗ್ ಮತ್ತು ಫಿಟ್ಟಿಂಗ್ ಮಾಡಲಾಗುತ್ತದೆ. ಅದಕ್ಕೆ ವೆಲ್ಡಿಂಗ್ ಮಷಿನದ ಬಳಕೆ ಮಾಡಲಾಗುತ್ತಿತ್ತು. ಹೀಗೆ ವೆಲ್ಡಿಂಗ್ ಮಷಿನ್ ಬಳಸುವ ವೇಳೆ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದೆ.

ಕಳೆದ ಹದಿನೈದು ವರ್ಷಗಳಿಂದ ಈ ಗ್ಯಾರೇಜ್ ನಲ್ಲಿ ಹಳೆಯ ಬಸ್ ಗಳ ರಿಪೇರಿ ಮಾಡಲಾಗುತ್ತಿತ್ತು. ಸುಮಾರು ಮೂರು ಎಕರೆ ಪ್ರದೇಶದಲ್ಲಿ ಈ ಗ್ಯಾರೇಜ್ ಮಾಡಲಾಗಿತ್ತು. ಹಳೆ ಬಸ್ ಗಳಿಗೆ ಹೊಸ ರೂಪ ಕೊಡುವ ಕೆಲಸವಾಗುತ್ತಿತ್ತು. ಆದರೆ ಈಗ ದೊಡ್ಡ ಅನಾಹುತವೇ ಸಂಭವಿಸಿದೆ. ಹದಿನೆಂಟು ಬಸ್ ಗಳು ಸುಟ್ಟು ಭಸ್ಮವಾಗಿವೆ. ಇನ್ನುಳಿದ ಹತ್ತು ಬಸ್ ಗಳಿಗೆ ಯಾವುದೇ ಹಾನಿಯಾಗಿಲ್ಲ. ಇನ್ನೂ ಈ ಗ್ಯಾರೇಜ್ ಗೆ ಅಗ್ನಿಶಾಮಕ ದಳದಿಂದ NOC ಕೂಡ ನೀಡಿರಲಿಲ್ಲ. ಗ್ಯಾರೇಜ್ ಒಳಗೆ ಯಾವುದೇ ಸೇಫ್ಟೀ ಮಾಡಿರಲಿಲ್ಲ. ಈ ಕಾರಣದಿಂದಾಗಿಯೇ ಈ ದುರಂತ ಸಂಭವಿಸಿದೆ ಎನ್ನಲಾಗ್ತಾ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!