Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಿನಲ್ಲಿ 18 ಬಸ್ ಗಳಿಗೆ ಬೆಂಕಿ : ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸಲು ಹರಸಾಹಸ..!

---Advertisement---

ಬೆಂಗಳೂರು: ಒಂದಲ್ಲ ಎರಡಲ್ಲ ಹದಿನೆಂಟು ಬಸ್ ಗಳು ಹೊತ್ತಿ ಉರೊದಿರುವ ಘಟನೆ ಬೆಂಗಳೂರಿನ ವೀರಭದ್ರ ನಗರದಲ್ಲಿ ನಡೆದಿದೆ. ಹದಿನೆಂಟು ಬಸ್ ಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರದಾಹಸ ಪಟ್ಟಿದ್ದು, ಸದ್ಯ ಬೆಂಕಿ ನಂದಿದೆ. ಆದರೆ ಬಸ್ ಗಳೆಲ್ಲ ಭಸ್ಮವಾಗಿದೆ.

 

ವೀರಭದ್ರ ನಗರದಲ್ಲಿ ಎಸ್ ವಿ ಕೋಚ್ ಎಂಬ ಗ್ಯಾರೇಜ್ ಇದೆ. ಈ ಗ್ಯಾರೇಜ್ ಅನ್ನು ಹಲವು ವರ್ಷಗಳಿಂದ ಶ್ರೀನಿವಾಸ್ ಎಂಬುವವರು ನಡೆಸಿಕೊಂಡು ಬರುತ್ತಿದ್ದಾರೆ. ಇದರ ಒಳಗೆ ಕಟ್ಟಿಂಗ್ ಮತ್ತು ಫಿಟ್ಟಿಂಗ್ ಮಾಡಲಾಗುತ್ತದೆ. ಅದಕ್ಕೆ ವೆಲ್ಡಿಂಗ್ ಮಷಿನದ ಬಳಕೆ ಮಾಡಲಾಗುತ್ತಿತ್ತು. ಹೀಗೆ ವೆಲ್ಡಿಂಗ್ ಮಷಿನ್ ಬಳಸುವ ವೇಳೆ ಬೆಂಕಿ ಹೊತ್ತಿಕೊಂಡಿರೋ ಶಂಕೆ ವ್ಯಕ್ತವಾಗಿದೆ.

ಕಳೆದ ಹದಿನೈದು ವರ್ಷಗಳಿಂದ ಈ ಗ್ಯಾರೇಜ್ ನಲ್ಲಿ ಹಳೆಯ ಬಸ್ ಗಳ ರಿಪೇರಿ ಮಾಡಲಾಗುತ್ತಿತ್ತು. ಸುಮಾರು ಮೂರು ಎಕರೆ ಪ್ರದೇಶದಲ್ಲಿ ಈ ಗ್ಯಾರೇಜ್ ಮಾಡಲಾಗಿತ್ತು. ಹಳೆ ಬಸ್ ಗಳಿಗೆ ಹೊಸ ರೂಪ ಕೊಡುವ ಕೆಲಸವಾಗುತ್ತಿತ್ತು. ಆದರೆ ಈಗ ದೊಡ್ಡ ಅನಾಹುತವೇ ಸಂಭವಿಸಿದೆ. ಹದಿನೆಂಟು ಬಸ್ ಗಳು ಸುಟ್ಟು ಭಸ್ಮವಾಗಿವೆ. ಇನ್ನುಳಿದ ಹತ್ತು ಬಸ್ ಗಳಿಗೆ ಯಾವುದೇ ಹಾನಿಯಾಗಿಲ್ಲ. ಇನ್ನೂ ಈ ಗ್ಯಾರೇಜ್ ಗೆ ಅಗ್ನಿಶಾಮಕ ದಳದಿಂದ NOC ಕೂಡ ನೀಡಿರಲಿಲ್ಲ. ಗ್ಯಾರೇಜ್ ಒಳಗೆ ಯಾವುದೇ ಸೇಫ್ಟೀ ಮಾಡಿರಲಿಲ್ಲ. ಈ ಕಾರಣದಿಂದಾಗಿಯೇ ಈ ದುರಂತ ಸಂಭವಿಸಿದೆ ಎನ್ನಲಾಗ್ತಾ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment