Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಜಿಲ್ಲೆಯಲ್ಲಿ 18 ಮಿ.ಮೀ. ಮಳೆ : ಎಲ್ಲೆಲ್ಲಿ ಎಷ್ಟು ಮಳೆ ಮತ್ತು ಹಾನಿ ವಿವರ..!

---Advertisement---

ಚಿತ್ರದುರ್ಗ. ಅ.09: ಚಿತ್ರದುರ್ಗ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸುರಿದ ಮಳೆ ವಿವರದನ್ವಯ ಸರಾಸರಿ 18 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನಲ್ಲಿ 19.4 ಮಿ.ಮೀ., ಚಿತ್ರದುರ್ಗ ತಾಲ್ಲೂಕು 29 ಮಿ.ಮೀ., ಹಿರಿಯೂರು ತಾಲ್ಲೂಕು 20.4 ಮಿ.ಮೀ.,ಹೊಳಲ್ಕೆರೆ ತಾಲ್ಲೂಕು 18.7 ಮಿ.ಮೀ., ಹೊಸದುರ್ಗ ತಾಲ್ಲೂಕು 9.7ಮಿ.ಮೀ. ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 2.7 ಮಿ.ಮೀ. ಮಳೆಯಾಗಿದೆ.

ಹೋಬಳಿವಾರು ಮಳೆ ವಿವರ:
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 16.6 ಮಿ.ಮೀ, ನಾಯಕನಹಟ್ಟಿ 30.3 ಮಿ.ಮೀ, ಪರಶುರಾಂಪುರ 18.1 ಮಿ.ಮೀ, ತಳಕು 15.3 ಮಿ.ಮೀ, ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 19.7 ಮಿ.ಮೀ, ಭರಮಸಾಗರ 43 ಮಿ.ಮೀ, ಹಿರೇಗುಂಟನೂರು 30 ಮಿ.ಮೀ, ತುರುವನೂರು 29.3 ಮಿ.ಮೀ, ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 20.3 ಮಿ.ಮೀ,. ಐಮಂಗಲ 14.7 ಮಿ.ಮೀ, ಧರ್ಮಪುರ 21 ಮಿ.ಮೀ, ಜವನಗೊಂಡನಹಳ್ಳಿ 26.6 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 19.5 ಮಿ.ಮೀ, ಬಿ.ದುರ್ಗ 11.4 ಮಿ.ಮೀ, ರಾಮಗಿರಿ 12.1 ಮಿ.ಮೀ, ತಾಳ್ಯ 28.6 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 11.3 ಮಿ.ಮೀ, ಮಾಡದಕೆರೆ 14.2 ಮಿ.ಮೀ,, ಮತ್ತೋಡು 7.5 ಮಿ.ಮೀ, ಶ್ರೀರಾಂಪುರ 3.7 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 4.7 ಮಿ.ಮೀ, ದೇವಸಮುದ್ರದಲ್ಲಿ 0.4 ಮಿ.ಮೀ ಮಳೆಯಾಗಿದೆ.

13 ಮನೆಗಳು ಹಾನಿ :
ಮಳೆಯಿಂದಾಗಿ ಜಿಲ್ಲೆಯಾದ್ಯಂತ 13 ಮನೆಗಳು ಭಾಗಶಃ ಹಾನಿಯಾಗಿದ್ದು, 2 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾಗೂ 2 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 01 ಭಾಗಶಃ ಮನೆಹಾನಿ, ಚಳ್ಳಕೆರೆ ತಾಲ್ಲೂಕಿನಲ್ಲಿ 08 ಭಾಗಶಃ ಮನೆಹಾನಿ ಹಾಗೂ 02 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾಗೂ 02 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 02 ಭಾಗಶಃ ಮನೆಹಾನಿ ಹಾಗೂ ಹಿರಿಯೂರು ತಾಲ್ಲೂಕಿನಲ್ಲಿ 02 ಮನೆಗಳು ಭಾಗಶ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...