Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸುಸ್ಥಿರ ಯೋಜನೆಯಡಿಲ್ಲಿ 2.50 ಕೋಟಿ ಸಹಾಯಧನ ಅನುದಾನ ಮಂಜೂರು : ಕಂದಿಕೆರೆ ಜಗದೀಶ್ ಜೆ.

---Advertisement---

 

ಹಿರಿಯೂರು, ಸೆಪ್ಟೆಂಬರ್. 07 : ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕಿನ 64 ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಸಭೆ ನಡೆಸಿ, ಸಹಕಾರಿ ಸಂಘಗಳಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ಕೃಷಿ ಇಲಾಖೆ,ಪಶು ಸಂಗೋಪನೆ ಇಲಾಖೆ ವತಿಯಿಂದ ದೊರೆಯುವ ಸರ್ಕಾರದ ಯೋಜನೆ, ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸಲಾಯಿತು.

ಕ.ರಾ.ಪ.ಸ.ಸ. ನಿ ಜಿಲ್ಲಾ ನಿರ್ದೇಶಕ ಹಾಗೂ ಕೃಷಿಕ ಸಮಾಜದ ಜಿಲ್ಲಾ ನಿರ್ದೇಶಕ ಕಂದಿಕೆರೆ ಜಗದೀಶ್ ಮಾತನಾಡಿ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ರವರ ಸಹಕಾರದಿಂದ ರಾಷ್ಟೀಯ ಸುಸ್ಥಿರ ಅಭಿಯಾನ ಯೋಜನೆಯಲ್ಲಿ ಹಿರಿಯೂರು ತಾಲೂಕಿನ 1000 ರೈತರಿಗೆ 2.50 ಕೋಟಿ ಸಹಾಯಧನ ವನ್ನು ಮುಂಜೂರು ಮಾಡಲಾಗಿದೆ. ತಾಲೂಕಿನ ಸಾವಿರ ರೈತರ ಬದುಕಿಗೆ ಇದು ಆಧಾರವಾಗಲಿದ್ದು ಅರ್ಹ ಮತ್ತು ಅವಶ್ಯಕತೆ ಇರುವ ರೈತರು ಈ ಯೋಜನೆಯ ಲಾಭ ಪಡೆಯಬೇಕು. ಎಲ್ಲಾ ಸಹಕಾರಿ ಸಂಘಗಳ ಪದಾಧಿಕಾರಿಗಳು ಈ ಯೋಜನೆಯ ಯಶಸ್ಸಿಗೆ ಶ್ರಮಿಸಬೇಕು. ಆಸಕ್ತ ಸಹಕಾರಿಗಳು ಛಾಪಾಕಾಗದ ವಿತರಣೆ,ಆಹಾರ ಸಂಸ್ಕರಣ ಕೇಂದ್ರಗಳು,ಗೊಬ್ಬರ ಬೀಜ ಕೇoದ್ರಗಳನ್ನು ತೆರೆಯಲು ಅನುಮತಿ ಪಡೆದು ಸಹಾಯಧನ ಪಡೆಯಲು ಆಸಕ್ತಿ ವಹಿಸಬೇಕು. ರೈತರು ಹಾವುಕಡಿತ,ಆತ್ಮಹತ್ಯೆ, ಆಕಸ್ಮಿಕ ಮರಣಗಳಂತಹ ಅವಘಡಗಳಿಗೆ ತುತ್ತಾದಾಗ ಸರ್ಕಾರದ ಸೌಲಭ್ಯವನ್ನು ಪಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಉಪ ನಿರ್ದೇಶಕರಾದ ಕುಮಾರ್,ತಿಪ್ಪೇಸ್ವಾಮಿ, ಪಶು ಸಂಗೋಪನೆ ಇಲಾಖೆ ವೈಧ್ಯಾಧಿಕಾರಿ ನಾಗರಾಜ್, ಕೃಷಿ ಅಧಿಕಾರಿ ಕಿರಣ್, ವಿಸ್ತರಣಾಧಿಕಾರಿ ಕೃಷ್ಣಕುಮಾರ್ ಹಾಗೂ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಭಾಗವಹಿಸಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment