Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ : ಭರ್ತಿ ಯಾವಾಗ..? ಗೃಹ ಸಚಿವರು ಹೇಳಿದ್ದೇನು..?

ಸಚಿವ ಪರಮೇಶ್ವರ್
---Advertisement---

 

ಮೈಸೂರು: ಸರ್ಕಾರಿ ನೌಕರಿ ಹುದ್ದೆಗಳಿಗೆ ಯಾವಾಗ ಅರ್ಜಿ ಆಹ್ವಾನ ಮಾಡುತ್ತಾರೆ ಅಂತ ಕೆಲ ವರ್ಷಗಳಿಂದ ಅಭ್ಯರ್ಥಿಗಳು ಓದುತ್ತಾ, ಕಾಯುತ್ತಾ ಕೂತಿದ್ದರು. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಉತ್ತರ ನೀಡಿದ್ದಾರೆ. ರಾಜ್ಯದಲ್ಲಿ ಎಷ್ಟು ಹುದ್ದೆಗಳು ಖಾಲಿ ಇದೆ ಎಂಬುದನ್ನು ತಿಳಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ 2.50 ಲಕ್ಷ ಹುದ್ದೆಗಳು ಖಾಲಿ ಇದೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆ ಖಾಲಿ ಇದೆ. ಮೊದಲ ಹಂತದಲ್ಲಿ 4 ಸಾವಿರ ಪೊಲೀಸ್ ಕಾಸ್ಟೇಬಲ್, 400 ಪಿಎಸ್‌ಐ ಹುದ್ದೆಗಳು ಖಾಲಿ ಇದೆ. ಶೀಘ್ರವೇ ಭರ್ತಿ ಮಾಡಲು ಮುಂದಾಗಿದ್ದೇವೆ ಎಂದಿದ್ದಾರೆ.

ಇನ್ನು ಇದೇ ವೇಳೆ ಹತ್ತು ಕೆಜಿ ಅಕ್ಕಿಯ ಬಗ್ಗೆ ಮಾತನಾಡಿ, ಜುಲೈ 1 ರಿಂದ ಅಕ್ಕಿ ಬದಲು ಹಣ ಕೊಡುವ ಪ್ರಕ್ರಿಯೆ ಶುರುವಾಗುತ್ತದೆ. ಜುಲೈನಲ್ಲಿ ಅಕ್ಕಿ ಬದಲು ಹಣ ಕೊಡುತ್ತೇವೆ ಅಂತಾ ಹೇಳಿದ್ದೆವು. ಆದರೆ ಜುಲೈ 1ರಂದೇ ಹಣ ಕೊಡುತ್ತೇವೆ ಹೇಳಿಲ್ಲ. ಈ ತಿಂಗಳಿನಿಂದಲೇ ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ. ಗೃಹಜ್ಯೋತಿ ಯೋಜನೆಯಲ್ಲಿ ಆಗಸ್ಟ್ ತಿಂಗಳ ಬಿಲ್ ಉಚಿತ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...