Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಸಿಎಂ ಜೊತೆಗೆ ಡಿಕೆಶಿಗೆ 2 ಪ್ರಭಾವಿ ಖಾತೆಗಳು.. ಯಾವುದು ಗೊತ್ತಾ..?

---Advertisement---

 

 

ಕಡೆಗೂ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವಿನ ಮುನಿಸು ದೂರವಾಗಿದೆ. ಇಬ್ಬರಲ್ಲಿ ಒಬ್ಬರನ್ನು ಸಿಎಂ ಮಾಡಲು ಹಾಗೂ ಒಬ್ಬರಿಗೆ ಡಿಸಿಎಂ ಹುದ್ದೆ ನೀಡಲು ಹೈಕಮಾಂಡ್ ತೀರ್ಮಾನ ಮಾಡಿದೆ. ಕಳೆದ ಎರಡ್ಮೂರು ದಿನದಿಂದ ದೆಹಲಿಯಲ್ಲಿಯೇ ಬೀಡು ಬಿಟ್ಟ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಕಡೆಗೂ ಒಂದು ನಿರ್ಧಾರಕ್ಕೆ ತಂದು ಸಮಾಧಾನ ಮಾಡಿದ್ದಾರೆ. ದೆಹಲಿಯಿಂದ ಬೆಂಗಳೂರಿನ ಕಡೆಗೆ ಹೊರಟಿರುವ ಇಬ್ಬರು ನಾಯಕರು ಶನಿವಾರ ಅಂದ್ರೆ ಮೇ 20ರಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಈ ಬಾರಿ ಪಕ್ಷ ಸಂಘಟನೆ ಮಾಡಿ, ಅಧಿಕಾರಕ್ಕೆ ತರುವಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪಾತ್ರವೂ ಮಹತ್ವದ್ದಾಗಿದೆ. ಹೀಗಾಗಿ ಇಬ್ಬರು ನಾಯಕರು ಪಟ್ಟು ಸಡಿಲಿಸದೆ ನಮಗೆ ಬೇಕು ನಮಗೆ ಬೇಕು ಅಂತ ಕಾದು ಕೂತಿದ್ದರು. ಡಿಕೆ ಶಿವಕುಮಾರ್ ಅವರಿಗೆ ಸಮಾಧಾನ ಮಾಡಿರುವ ಹೈಕಮಾಂಡ್ ಡಿಸಿಎಂ ಹುದ್ದೆ ಜೊತೆಗೆ ಜಲಸಂಪನ್ಮೂಲ ಹಾಗೂ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನೀಡಿದೆ.

ಹಣಕಾಸು ಖಾತೆಗಾಗಿ ಡಿಕೆ ಶಿವಕುಮಾರ್ ಡಿಮ್ಯಾಂಡ್ ಇಟ್ಟಿದ್ದರು ಎನ್ನಲಾಗಿದೆ. ಆದರೆ ಸಿದ್ದರಾಮಯ್ಯ ಅವರು ಆ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಜೊತೆಗೆ ಡಿಕೆ ಶಿವಕುಮಾರ್ ಅವರು ಮತ್ತೊಂದು ಕಂಡೀಷನ್ ಹಾಕಿದ್ದು, ಡಿಸಿಎಂ ಹುದ್ದೆ ಒಂದೇ ಇರಬೇಕು ಎಂದಿದ್ದಾರೆ. ಹೈಕಮಾಂಡ್ ಕೂಡ ಒಪ್ಪಿಗೆ ಸೂಚಿಸಿದೆ. ಈ ಮೂಲಕ ಡಿಸಿಎಂ ಕನಸು ಕಾಣುತ್ತಿದ್ದ ಹಿರಿಯರಿಗೆ ಬೇಸರವಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment