2018 ರ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ.. ಈಗ ಅವರ ಆಪ್ತನ ಮನೆ ಮೇಲೆ ಐಟಿ ದಾಳಿ..!

suddionenews
1 Min Read

 

ಧಾರವಾಡ: ಬಿಜೆಪಿ ನಾಯಕ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಸದ್ಯ ಧಾರವಾಡದ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಸದ್ಯ ವಿನಯ್ ಕುಲಕರ್ಣಿ ಅವರ ಆಪ್ತನ ಮನೆ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿನಯ್ ಕುಲಕರ್ಣಿ ಆಪ್ತ ಪ್ರಶಾಂತ್ ಕೇಕರೆ ಸದ್ಯ ಚುನಾವಣಾ ಪ್ರಚಾರದಲ್ಲಿದ್ದಾರೆ. ಇದರ ನಡುವೆ ಮನೆ ಮೇಲೆ ದಾಳಿಯಾಗಿದೆ. ಸಪ್ತಾಪುರ ಋಷಿ ಪಾರ್ಕ್ ಬಳಿ ಇರುವ ನಿವಾಸದ ಮೇಲೆ ದಾಳಿಯಾಗಿದೆ. ಕೆಲವು ದಾಖಲಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಪ್ರಚಾರಕ್ಕೆ ಹೋಗಿರುವ ಕೇಕೆರೆ ಬರುವಿಕೆಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.

ಇನ್ನು ಐಟಿ ಅಧಿಕಾರಿಗಳು ಸರಿಯಾಗಿ ಕಳೆದ ಐದು ವರ್ಷದ ಹಿಂದೆ ಅಂದ್ರೆ 2018ರ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ ಮನೆ ಮೇಲೆ ದಾಳಿ ನಡೆಸಿದ್ದರು. ಇದೀಗ ಈ ವರ್ಷದ ಚುನಾವಣೆಯಲ್ಲಿ ಆಪ್ತನ ಮನೆ ಮೇಲೆ ದಾಳಿಯಾಗಿದೆ. ಇನ್ನು ಕೆಲ ದಿನಗಳ ಹಿಂದಷ್ಟೇ ವಿನಯ್ ಕುಲಕರ್ಣಿ ನನ್ನ ಆಪ್ತನ ಮೇಲೆ ದಾಳಿ ಮಾಡಲು ಪ್ಲ್ಯಾನ್ ಮಾಡಲಾಗಿದೆ ಎಂದಿದ್ದರು. ಈಗ ಅದೇ ನಿಜವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks