Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2018 ರ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ.. ಈಗ ಅವರ ಆಪ್ತನ ಮನೆ ಮೇಲೆ ಐಟಿ ದಾಳಿ..!

Facebook
Twitter
Telegram
WhatsApp

 

ಧಾರವಾಡ: ಬಿಜೆಪಿ ನಾಯಕ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಸದ್ಯ ಧಾರವಾಡದ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಸದ್ಯ ವಿನಯ್ ಕುಲಕರ್ಣಿ ಅವರ ಆಪ್ತನ ಮನೆ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ವಿನಯ್ ಕುಲಕರ್ಣಿ ಆಪ್ತ ಪ್ರಶಾಂತ್ ಕೇಕರೆ ಸದ್ಯ ಚುನಾವಣಾ ಪ್ರಚಾರದಲ್ಲಿದ್ದಾರೆ. ಇದರ ನಡುವೆ ಮನೆ ಮೇಲೆ ದಾಳಿಯಾಗಿದೆ. ಸಪ್ತಾಪುರ ಋಷಿ ಪಾರ್ಕ್ ಬಳಿ ಇರುವ ನಿವಾಸದ ಮೇಲೆ ದಾಳಿಯಾಗಿದೆ. ಕೆಲವು ದಾಖಲಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಪ್ರಚಾರಕ್ಕೆ ಹೋಗಿರುವ ಕೇಕೆರೆ ಬರುವಿಕೆಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.

ಇನ್ನು ಐಟಿ ಅಧಿಕಾರಿಗಳು ಸರಿಯಾಗಿ ಕಳೆದ ಐದು ವರ್ಷದ ಹಿಂದೆ ಅಂದ್ರೆ 2018ರ ಚುನಾವಣೆಯಲ್ಲಿ ವಿನಯ್ ಕುಲಕರ್ಣಿ ಮನೆ ಮೇಲೆ ದಾಳಿ ನಡೆಸಿದ್ದರು. ಇದೀಗ ಈ ವರ್ಷದ ಚುನಾವಣೆಯಲ್ಲಿ ಆಪ್ತನ ಮನೆ ಮೇಲೆ ದಾಳಿಯಾಗಿದೆ. ಇನ್ನು ಕೆಲ ದಿನಗಳ ಹಿಂದಷ್ಟೇ ವಿನಯ್ ಕುಲಕರ್ಣಿ ನನ್ನ ಆಪ್ತನ ಮೇಲೆ ದಾಳಿ ಮಾಡಲು ಪ್ಲ್ಯಾನ್ ಮಾಡಲಾಗಿದೆ ಎಂದಿದ್ದರು. ಈಗ ಅದೇ ನಿಜವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!