Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

2024-25ನೇ ಉತ್ತಮ ಶಿಕ್ಷಕರ ಪ್ರಶಸ್ತಿ : ಹಿರಿಯೂರಿನ ಪರಮೇಶ್ವರಪ್ಪ ಪ್ರಶಸ್ತಿಗೆ ಭಾಜನ

---Advertisement---

ಚಿತ್ರದುರ್ಗ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಣ ಇಲಾಖೆ ವತಿಯಿಂದ ಉತ್ತಮ ಶಿಕ್ಷಕರ ಪ್ರಶಸ್ತಿಯನ್ನು ನೀಡಲಾಗುತ್ತದೆ. 2024-25ನೇ ಸಾಲಿನ ಪ್ರಶಸ್ತಿ ಘೋಷಣೆಯಾಗಿದ್ದು, ಈ ಬಾರಿ ಹಿರಿಯೂರಿನ ಶಿಕ್ಷಕ ಪರಮೇಶ್ವರಪ್ಲ ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯಿಂದ ಹಿರಿಯೂರು ತಾಲೂಕಿನ ಪರಮೇಶ್ಚರಪ್ಪ ಅವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತಾಲೂಕಿನ ಮ್ಯಾಕ್ಲೂರಹಳ್ಳಿ ಹೊಸಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇವರು ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಿಕ್ಷಕ ಪರಮೇಶ್ವರಪ್ಪ ಅವರು ಮೂಲತಃ ಹಿರಿಯೂರು ತಾಲೂಕಿನ ರಾಮಜೋಗಿಹಳ್ಳಿ ಗ್ರಾಮದವರು. 1998ರಲ್ಲಿ ತಮ್ಮ ಶಿಕ್ಷಕ ವೃತ್ತಿಯನ್ನು ಆರಂಭಿಸಿದ್ದರು.

ಪಿಯುಸಿ ಹಾಗೂ ಟಿಸಿಎಚ್ ವಿದ್ಯಾಭ್ಯಾಸ ಮುಗಿಸಿ ಶಿಕ್ಷಕ ವೃತ್ತಿಗೆ ಬಂದ ಇವರು ಮೊದಲ ಬಾರಿಗೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಚಿನ್ನಹಳ್ಳಿಯಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ತಾಲೂಕಿಗೆ ವರ್ಗಾವಣೆಗೊಂಡರು. 2022ರಲ್ಲಿ ಸೂರಪ್ಪನಹಟ್ಟಿ ಶಾಲೆಯಲ್ಲಿ ತಮ್ಮ ಸೇವೆ ಸಲ್ಲಿಸಿದರು. ಈ ಶಾಲೆಯಲ್ಲಿ ಅವರು ಸಲ್ಲಿಸಿದ ಸೇವೆಗೆ ಅರಣ್ಯ ಇಲಾಖೆಯಿಂದ ಪರಿಸರ ಮಿತ್ರ ಎಂಬ ಪ್ರಶಸ್ತಿ ಬಂದಿದೆ. ಸದ್ಯಕ್ಕೆ ಮ್ಯಾಕ್ಲೂರಹಳ್ಳಿ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮುಂದಿಮ ಜೂನ್ ತಿಂಗಳಲ್ಲಿ ಅವರು ಶಿಕ್ಷಕ ವೃತ್ತಿಯಿಂದ ನಿವೃತ್ತಿ ಹೊಂದಲಿದ್ದಾರೆ.

ಇನ್ನು ರಾಜ್ಯಮಟ್ಟದ ಉತ್ತಮ ಶಿಕ್ಷಕ ಎಂಬ ಪ್ರಶಸ್ತಿ ಬಂದಿದ್ದರ ಬಗ್ಗೆ ಪರಮೇಶ್ವರ್ ಅವರು ಸಂತಸ ಹಂಚಿಕೊಂಡಿದ್ದಾರೆ. ನಾನು ಯಾವ ಪ್ರಶಸ್ತಿಯನ್ನು ನಿರೀಕ್ಷೆ ಮಾಡಿರಲಿಲ್ಲ. ಮುಂದಿನ ವರ್ಷ ಸೇವೆಯಿಂದ ನಿವೃತ್ತಿ ಹೊಂದುತ್ತಿದ್ದೇನೆ. ನನ್ನ ಶಿಕ್ಷಣ ವೃತ್ತಿಯ ಸೇವೆಯನ್ನು ಗುರುತಿಸಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುತ್ತಿರುವುದು ಸಂತೋಷ ನೀಡಿದೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...