Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೇ 15 ರಂದು ರಾಜವೀರ ಮದಕರಿನಾಯಕರ 242 ನೇ ಪುಣ್ಯಸ್ಮರಣೆ : ಬಿ.ಕಾಂತರಾಜ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 13  : ರಾಜವೀರ ಮದಕರಿನಾಯಕರ 242 ನೆ ಪುಣ್ಯಸ್ಮರಣೆ ಮೇ. 15 ರಂದು ಸರಳವಾಗಿ ಆಚರಿಸಲಾಗುವುದೆಂದು ನಾಯಕ ಸಮಾಜದ ತಾಲ್ಲೂಕು ಅಧ್ಯಕ್ಷ ಬಿ.ಕಾಂತರಾಜ್ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮದಕರಿನಾಯಕನ ಪ್ರತಿಮೆಯನ್ನು ವಿಶೇಷವಾಗಿ ಅಲಂಕರಿಸಿ ಸಮಸ್ತ ಜನತೆಗೂ ಪುಪ್ಷಾರ್ಚನೆ ಸಲ್ಲಿಸಲು ಅವಕಾಶ ಮಾಡಿಕೊಡಲಾಗುವುದು. ಮದಕರಿನಾಯಕನನ್ನು ಸ್ಮರಿಸುವುದರಲ್ಲಿ ಹಿಂದೆ ಬಿದ್ದಿದ್ದೇವೇನೋ ಅನ್ನಿಸುತ್ತೆ. ಮುಂದಿನ ದಿನಗಳಲ್ಲಿ ಸ್ಮರಣೋತ್ಸವ, ಪಟ್ಟಾಭಿಷೇಕ, ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಗುವುದು. ನಾಳೆ ನಡೆಯುವ ಪುಣ್ಯಸ್ಮರಣೆಯಲ್ಲಿ ಪ್ರತಿಮೆ ಎದುರು ಮೇಣದ ಬತ್ತಿ ಹಚ್ಚಲಾಗುವುದು. ಜಿಲ್ಲೆಯ ಸಮಸ್ತರು ಭಾಗವಹಿಸುವಂತೆ ಬಿ.ಕಾಂತರಾಜ್ ಮನವಿ ಮಾಡಿದರು.

ಚಿತ್ರದುರ್ಗದಲ್ಲಿ ಮದಕರಿನಾಯಕ ಥೀಂ ಪಾರ್ಕ್ ನಿರ್ಮಾಣ ಮಾಡುವುದಾಗಿ ಅಮಿತ್‍ಷಾ ಕಳೆದ ವರ್ಷವೇ ಭರವಸೆ ಕೊಟ್ಟಿದ್ದರು. ಇನ್ನು ಈಡೇರಿಲ್ಲ. ನಮ್ಮ ಒತ್ತಾಯ ನಿರಂತರವಾಗಿರುತ್ತದೆಂದು ಹೇಳಿದರು.

ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮಾತನಾಡಿ ಚುನಾವಣೆ ನೀತಿ ಸಂಹಿತೆಯಿರುವುದರಿಂದ ಮದಕರಿನಾಯಕನ ಪುಣ್ಯಸ್ಮರಣೆಯನ್ನು ಯಾವುದೇ ಆಡಂಭರವಿಲ್ಲದೆ ಸರಳವಾಗಿ ಆಚರಿಸುತ್ತೇವೆ. ಇದು ಕೇವಲ ನಾಯಕ ಜನಾಂಗದವರಿಗಷ್ಟೆ ಸೀಮಿತವಲ್ಲ. ಎಲ್ಲಾ ಜಾತಿಯವರ ಸಹಕಾರ ಬೇಕು ಎಂದು ಕೋರಿದರು.
ಮುಂದಿನ ವರ್ಷದಿಂದ ಅದ್ದೂರಿಯಾಗಿ ಆಚರಿಸುತ್ತೇವೆಂದರು.

ಜೆ.ಎನ್.ಕೋಟೆ ಗುರುಸಿದ್ದಪ್ಪ, ಕಾಟಿಹಳ್ಳಿ ಕರಿಯಪ್ಪ, ನಗರಸಭೆ ಸದಸ್ಯ ದೀಪು, ಮಾಜಿ ಸದಸ್ಯ ತಿಪ್ಪೇಸ್ವಾಮಿ, ಡಿ.ಗೋಪಾಲಸ್ವಾಮಿ ನಾಯಕ, ಹೆಚ್.ಅಂಜಿನಪ್ಪ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

ಪ್ರತಿಭಾ ಪುರಸ್ಕಾರ :

ಚಿತ್ರದುರ್ಗ : 2023-24 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಪ್ರತಿಭಾನ್ವಿತ ಮಕ್ಕಳಿಗೆ ಮಹಾ ಶಿವಶರಣ ಹರಳಯ್ಯ ಗುರುಪೀಠ, ಹರಳಯ್ಯ ವಿದ್ಯಾಸಂಸ್ಥೆ, ಹರಳಯ್ಯ ಆಂಗ್ಲ ಮಾಧ್ಯಮ ಶಾಲೆ ಸಹಯೋಗದೊಂದಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ.

ಅರ್ಹ ವಿದ್ಯಾರ್ಥಿಗಳು ದಿನಾಂಕ: 25-5-2024 ರ ಒಳಗಾಗಿ ಮಹಾಶಿವಶರಣ ಗುರುಪೀಠ ಐಮಂಗಲ ಇಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳುವಂತೆ ಬಸವ ಹರಳಯ್ಯ ಮಹಾಸ್ವಾಮೀಜಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ: 9449939016, 7259551325 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment