25ನೇ ಕಾರ್ಗಿಲ್ ವಿಜಯ ದಿವಸ್ | 100ಕ್ಕೂ ಹೆಚ್ಚು ಮಾಜಿ ಸೈನಿಕರನ್ನು ಗೌರವ ಸಲ್ಲಿಸಿದ ವೇದಾಂತ ಸೆಸಾ ಗೋವಾ

 

ಚಿತ್ರದುರ್ಗ, ಆಗಸ್ಟ್ 2 : ವೇದಾಂತ ಸೆಸಾ ಗೋವಾ ಸಂಸ್ಥೆಯು 25ನೇ ಕಾರ್ಗಿಲ್ ವಿಜಯ ದಿವಸದ ಹಿನ್ನೆಲೆಯಲ್ಲಿ ತಮ್ಮ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ನೂರಕ್ಕೂ ಹೆಚ್ಚು ಮಾಜಿ ಸೈನಿಕರನ್ನು ಸನ್ಮಾನಿಸಿ ಗೌರವ ಸಲ್ಲಿಸಿತು. ಕಂಪನಿಯು ತನ್ನ ಭದ್ರತಾ ವಲಯದಲ್ಲಿ ಬಹುತೇಕ ಮಾಜಿ ಸೈನಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿರುವುದು ವಿಶೇಷ.

ಸೆಸಾ ಗೋವಾದ ಭದ್ರತಾ ತಂಡದ ಉಸ್ತುವಾರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರಿಗೆ ಶಾಲು ಹೊದೆಸಿ, ಸ್ಮರಣಿಕೆಗಳನ್ನು ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅವರು ಸೈನಿಕರಾಗಿ ಕೆಲಸ ಮಾಡುತ್ತಿದ್ದಾಗಿನ ಅನುಭವಗಳನ್ನು ಹಂಚಿಕೊಂಡರು. ಸನ್ಮಾನ ಕಾರ್ಯಕ್ರಮದಲ್ಲಿ ಎಸ್ ಬಿ ಯುನ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಗಿಲ್ ವಿಜಯ ದಿವಸದ ಸ್ಮರಣಾರ್ಥವಾಗಿ ದೇಶದ ರಕ್ಷಣೆಗೆ ಕೊಡುಗೆ ನೀಡಿದ ಮಾಜಿ ಸೈನಿಕರ ಕೊಡುಗೆಯನ್ನು ಗುರುತಿಸಿ ಗೌರವಿಸುವ ಸಲುವಾಗಿ ನಡೆದ ಈ ಸನ್ಮಾನ ಕಾರ್ಯಕ್ರಮವನ್ನು ಐದು ರಾಜ್ಯಗಳಲ್ಲಿ ಆಯೋಜಿಸಲಾಗಿತ್ತು. ಸೆಸಾ ಗೋವಾ ಸೆಕ್ಯುರಿಟಿ ಸಂಸ್ಥೆಯು ತಮ್ಮ ಭದ್ರತಾ ತಂಡದಲ್ಲಿ ಹಲವಾರು ಮಾಜಿ ಸೈನಿಕರನ್ನು ಸೇರಿಸಿಕೊಂಡಿದೆ. ಅವರ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಕೈಗಾರಿಕಾ ವಲಯ ಮತ್ತು ಕಾರ್ಪೊರೇಟ್ ವಲಯದ ಭದ್ರತೆಗೆ ಸಂಬಂಧಿಸಿದ ದೊಡ್ಡ ಜವಾಬ್ದಾರಿಗಳನ್ನು ವಹಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ವೇದಾಂತ ಸೆಸಾ ಗೋವಾ ಐರನ್ ಓರ್ ಸಿಇಓ ಶ್ರೀ. ನವಿನ್ ಜಾಜು ಅವರು, “25ನೇ ಕಾರ್ಗಿಲ್ ವಿಜಯ ದಿವಸ ಆಚರಣೆ ಭಾರತೀಯರ ಹೆಮ್ಮೆಯ ಕ್ಷಣವಾಗಿದೆ. ನಾನು ಎಲ್ಲಾ ಸೈನಿಕರ ತ್ಯಾಗಕ್ಕೆ, ಸೇವೆಗೆ ಸೆಲ್ಯೂಟ್ ಮಾಡುತ್ತೇನೆ. ಸಮಾಜಕ್ಕೆ ಒಳಿತು ಮಾಡುವ ನಮ್ಮ ಉದ್ದೇಶದ ಭಾಗವಾಗಿ ಸೈನಿಕರನ್ನು ಸನ್ಮಾನಿಸಿ ಗೌರವಿಸಲು ಹೆಮ್ಮೆ ಪಡುತ್ತೇವೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ವೇದಾಂತ ಐಓಕೆ ಸಿಇಓ ಶ್ರೀಶೈಲ ಗೌಡ ಅವರು, “ಸಶಸ್ತ್ರ ಪಡೆಗಳ ಶೌರ್ಯ, ಬದ್ಧತೆಗೆ ನಮಸ್ಕಾರ. ಕಾರ್ಗಿಲ್ ವಿಜಯ ದಿವಸದ ಹಿನ್ನೆಲೆಯಲ್ಲಿ ಸೈನಿಕರ ಕೊಡುಗೆ, ತ್ಯಾಗ, ಬಲಿದಾನಗಳಿಗೆ ಹೆಮ್ಮೆಯಿಂದ ಗೌರವ ಸಲ್ಲಿಸುತ್ತಿದ್ದೇವೆ” ಎಂದು ಹೇಳಿದರು. ಸೆಸಾ ಗೋವಾದ ಸಿಎಸ್ಓ ಶ್ರೀ ನಂದ್ ಭಟ್ ಸೈನಿಕರಿಗೆ ಗೌರವ ಸಲ್ಲಿಸುವ ಕುರಿತು ಹೆಮ್ಮೆ ವ್ಯಕ್ತಪಡಿಸಿದರು.

ವೇದಾಂತ ಕಂಪನಿಯು ತಮ್ಮ ಸಂಸ್ಥೆಗೆ ಮಾಜಿ ಸೈನಿಕರನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ ಮತ್ತು ಸೈನಿಕರ ನೇಮಕಾತಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ವಿಶೇಷ ರೀತಿಯಲ್ಲಿ ಆಚರಿಸುತ್ತಿದೆ. ಕಳೆದ ವರ್ಷ ‘ಗರ್ವದಿಂದ’ ಎಂಬ ಅಭಿಯಾನವನ್ನು ಪ್ರಾರಂಭಿಸಿ, ದೇಶಕ್ಕಾಗಿ ದೇಹ ತ್ಯಾಗ ಮಾಡಿದ ವೀರರಿಗೆ ಮತ್ತು ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರಿಗೆ ಕೃತಜ್ಞತೆ ಸಲ್ಲಿಸಲು ಪತ್ರ ಚಳುವಳಿ ಆಯೋಜಿಸಿತ್ತು. ಪಿವಿಸಿ ಮತ್ತು ಟೈಗರ್ ಹಿಲ್ ಹೀರೋ ಸುಬೇದಾರ್ ಮೇಜರ್ (ಹಾನರರಿ ಕ್ಯಾಪ್ಟನ್) ಯೋಗೇಂದ್ರ ಸಿಂಗ್ ಯಾದವ್ ಅವರು ವಿಡಿಯೋ ಮೂಲಕ ಉದ್ಯೋಗಿಗಳ ಜೊತೆ ಸಂವಹನ ನಡೆಸಿ ಸ್ಫೂರ್ತಿದಾಯಕ ಮಾತುಕತೆ ನಡೆಸಿಕೊಟ್ಟಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago