ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ : 27 ಜನ ಪುಂಡರ ಬಂಧನ..!

suddionenews
1 Min Read

ಬೆಳಗಾವಿ: ದಿನೇ ದಿನೇ ಎಂಇಎಸ್ ಪುಂಡರ ಪುಂಡಾಟ ಹೆಚ್ಚಾಗುತ್ತಲೇ ಇದೆ. ಇದೀಗ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿನೆಯನ್ನ ಧ್ವಂಸಗೊಳಿಸಿದ್ದಾರೆ. ಈ ಸಂಬಂಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಪೊಲೀಸರು 27 ಜನರನ್ನ ಬಂಧಿಸಿದ್ದಾರೆ.

ಇಂದು ಬೆಳಗ್ಗೆಯಿಂದಲೇ ನಗರದಲ್ಲಿ‌ ನಿಷೇಧಾಜ್ಞೆ ಜಾರಿಯಲ್ಲಿದೆ. ಇಲ್ಲಿವರೆಗೆ 27 ಜನರನ್ನು ಬಂಧಿಸಲಾಗಿದೆ. ಇವತ್ತು ಮತ್ತು ನಾಳೆ ನಗರದಲ್ಲಿ ಯಾವುದೇ ಪ್ರತಿಭಟನೆಗೂ ಅವಕಾಶವಿರುವುದಿಲ್ಲ. ಜನರು ಶಾಂತಿ ಕಾಪಾಡ್ಬೇಕು ಅಂತ ಡಿಸಿಪಿ ವಿಕ್ರಂ ಆಮ್ಟೇ ತಿಳಿಸಿದ್ದಾರೆ.

ಇತ್ತೀಚೆಗೆ ಸ್ಥಾಪಿಸಲಾಗಿದ್ದ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ರಾತ್ರೋರಾತ್ರಿ ಧ್ವಂಸ ಮಾಡಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಟಳಕವಾಡಿ ಪೊಲೀಸರು ಸ್ಥಳಕ್ಕೆ ತಕ್ಷಣ ಬಂದು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *