Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀ ಶ್ರೀ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳ ಪೀಠಾರೋಹಣದ 2 ನೇ ವಾರ್ಷಿಕೋತ್ಸವ : ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ವತಿಯಿಂದ ರಕ್ತದಾನ ಶಿಬಿರ

---Advertisement---

ಸುದ್ದಿಒನ್, ಚಿತ್ರದುರ್ಗ, (ಜು.15) : ರಕ್ತದಾನ ಮಹಾದಾನ ಇಂತಹ ಪುಣ್ಯದ ಕೆಲಸದಲ್ಲಿ ನೀವು ಭಾಗಿಗಳಾಗಿದ್ದೀರಾ ಪರಮಾತ್ಮ ನಿಮಗೆ ಆರೋಗ್ಯ ಭಾಗ್ಯವನ್ನು ಕೊಟ್ಟು ಕಾಪಾಡಲಿ ಹಾಗೂ ಒಂದು ಜೀವ ಉಳಿಸಿದ ಪುಣ್ಯ ನಿಮ್ಮದಾಗುತ್ತದೆ ಎಂದು ಶ್ರೀ ಶ್ರೀ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳು ಹೇಳಿದರು.

ಅವರು ನಗರದ ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ಹಾಗೂ ವಾಸವಿ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಶ್ರೀ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳವರ ಎರಡನೇ ವರ್ಷದ ಪೀಠಾರೋಹಣದ ಅಂಗವಾಗಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ರಕ್ತದಾನ ಶಿಬಿರಗಳನ್ನು ಏರ್ಪಡಿಸಿ ಇಂಥ ಒಳ್ಳೆ ಕಾರ್ಯಗಳನ್ನು ಮಾಡಿ ಜನಾನುರಾಗಿಗಳಾಗಿ ಹಾಗೂ ಜನರಿಗೆ ಅನುಕೂಲವಾಗುವ ಮತ್ತಷ್ಟು ಕಾರ್ಯಗಳನ್ನ ನೀಡಿ ಎಂದು ಹೇಳಿದರು. ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ಹಾಗೂ ವಾಸವಿ ರಕ್ತ ನಿಧಿ ಕೇಂದ್ರ ಕಾರ್ಯಕಾರಿ ಸಮಿತಿಯವರ ಕಾರ್ಯವನ್ನು ಶ್ಲಾಘಿಸಿದರು.

ಈ ರಕ್ತದನ ಶಿಬಿರದಲ್ಲಿ 21 ಜನ ಸ್ವಯಂಪ್ರೇರಿತವಾಗಿ ರಕ್ತದಾನವನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಸವಿ ಕ್ಲಬ್ ಅಧ್ಯಕ್ಷರಾದ ಎ.ಆರ್.ಲಕ್ಷ್ಮಣ್ ನಡೆಸಿಕೊಟ್ಟರು. ಹಾಗೂ ಕಾರ್ಯದರ್ಶಿ ಕೋಟೇಶ್ವರ ಗುಪ್ತ, ಖಜಾಂಚಿ ವೇಣುಗೋಪಾಲ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸತ್ಯನಾರಾಯಣ, ಮಂಜುನಾಥ್, ಸುಹಾಸ್, ಕಲ್ಪನಾ ಪಾಲ ಸಂತೋಷ್ ಹಾಗೂ ಆರ್ಯವೈಶ್ಯ ಕುಲಬಾಂಧವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿಕೊಟ್ಟರು.

ವಾಸವಿ ರಕ್ತ ನಿಧಿ ಕೇಂದ್ರದ ಡಾ. ಶ್ರೀನಿವಾಸ್ ಶೆಟ್ಟಿ ಹಾಗೂ ಶ್ರೀಮತಿ ಉಷಾ ಶ್ರೀನಿವಾಸ್ ಶೆಟ್ಟಿ ಸೇರಿದಂತೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...