Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳ ಪೀಠಾರೋಹಣದ 2 ವಾರ್ಷಿಕೋತ್ಸವ : ಚಿತ್ರದುರ್ಗದಲ್ಲಿ ಭಕ್ತಿ ಸಿಂಚನ ಶೋಭಾಯಾತ್ರೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.15) : ಆರ್ಯವೈಶ್ಯ ಸಂಘ, ಆರ್ಯವೈಶ್ಯ ಸಹ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ವಾಸವಿ ಜಗದ್ಗುರು ಮಹಾಸಂಸ್ಥಾನಂ, ವಾಸವಿ ಪೀಠಂ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳವರ ಪೀಠಾರೋಹಣದ 2 ನೇ ವಾರ್ಷಿಕೋತ್ಸವ ಅಂಗವಾಗಿ ಭಕ್ತಿ ಸಿಂಚನ ಶೋಭಾಯಾತ್ರೆ ಶನಿವಾರ ನಗರದಲ್ಲಿ ನಡೆಯಿತು.

ಚಳ್ಳಕೆರೆ ಟೋಲ್‍ಗೇಟ್ ಸಮೀಪ ವಿಧಾನಪರಿಷತ್ ಸದಸ್ಯ ಡಿ.ಎಸ್.ಅರುಣ್‍ಕುಮಾರ್ ಬೈಕ್‍ರ್ಯಾಲಿ ಉದ್ಗಾಟಿಸಿದರು.

ಕನ್ನಿಕಾ ಪರಮೇಶ್ವರಿ ಉತ್ಸವ ಮೂರ್ತಿ ಹಾಗೂ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳನ್ನು ನಾದಸ್ವರ ಹಾಗೂ ಚಂಡೆ ವಾದ್ಯಗಳೊಂದಿಗೆ ರಾಜಬೀದಿಗಳಲ್ಲಿ ವೈಭವದ ಶೋಭಾಯಾತ್ರೆ ಕರೆದೊಯ್ಯಲಾಯಿತು.

ಮದಕರಿವೃತ್ತದ ಮೂಲಕ ಸಾಗಿದ ಶೋಭಾಯಾತ್ರೆಯನ್ನು ವಾಸವಿ ಸರ್ಕಲ್‍ನಲ್ಲಿ ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು.

ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಗೋಪೂಜೆ, ವೇದಘೋಷ, ವಿವಿಧ ಹೋಮಗಳು ನಡೆಯಿತು. ವಿವಿಧ ಭಜನಾ ಮಂಡಳಿಯಿಂದ ಭಜನೆಯಿತ್ತು.

ಆರ್ಯವೈಶ್ಯ ನಿಗಮ ಮಂಡಳಿ ಅಧ್ಯಕ್ಷ ಲಿಂಗಂ ಶ್ರೀನಿವಾಸ್, ಕೃಷ್ಣ, ಭಕ್ತಿಸಿಂಚನ ಕಾರ್ಯಕ್ರಮದ ಸ್ವಾಗತ ಸಮಿತಿ ಗೌರವಾಧ್ಯಕ್ಷ ಎಸ್.ಎನ್.ಕಾಶಿವಿಶ್ವನಾಥಶೆಟ್ಟಿ, ಕಾರ್ಯದರ್ಶಿ ಟಿ.ಭದ್ರಿನಾಥ್, ಪುಟ್ಟರಾಜು, ಕಾಂತರಾಜು, ಮಂಜುಪ್ರಸಾದ್, ಅವಿನಾಶ್, ಯಶಸ್  ಇನ್ನು ಅನೇಕರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

error: Content is protected !!