Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

3 ದಿನಗಳ ಹಿಂದೆ ಆಕ್ಸಿಡೆಂಟ್ : ಇಂದು ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ..!

Facebook
Twitter
Telegram
WhatsApp

ಬೆಂಗಳೂರು: ಮೂರು ದಿನಗಳ ಹಿಂದೆ ಕಾರಿನಲ್ಲಿ ಹೋಗುವಾಗ ಆಗಿದ್ದ ಆಕ್ಸಿಡೆಂಟ್‌ನಿಂದಾಗಿ ಇಂದು ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ ಅವರನ್ನ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಐಸಿಯೂನಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ. ಆಕ್ಸಿಡೆಂಟ್ ನಲ್ಲಿ ತಲೆಗೆ ಪೆಟ್ಟು ಬಿದ್ದ ಕಾರಣ ಬ್ರೈನ್ ಬಲವಾಗಿ ಹೊಡೆತ ಬಿದ್ದಿದೆ. ಮೆದುಳಿನ ರಕ್ತಸ್ರಾವ ಉಂಟಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಕ್ಸಿಡೆಂಟ್ ಆದ ಬಳಿಕ ಮನೆಯಲ್ಲೆರ ಚಿಕಿತ್ಸೆ ಮುಂದುವರೆಸಿದ್ದರಂತೆ. ಪ್ರತಿದಿನ ಪೂಜೆ ಮಾಡುವಂತೆ ರಾತ್ರಿ ಅಯ್ಯಪ್ಪನ ಪೂಜೆ ಮಾಡಲು ದೇವರ ಕೋಣೆಗೆ ಹೋದಾಗ ಈ ವೇಳೆ ರೂಂ ನಲ್ಲೆ ಕುಸಿದು ಬಿದ್ದಿದ್ದರಂತೆ. ಆಗಲೇ ಆಸ್ಪತ್ರೆಗೆ ಕರೆದುಕೊಂಡು ಬಂದು ಎಲ್ಲಾ ಚೆಕಪ್ ಮಾಡಿಸಿದಾಗ ಮೆದುಳಿನಲ್ಲಿ ರಕ್ತಸ್ರಾವವಾಗಿದೆ ಎಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿರೋ ಕಾರಣ ಆಪರೇಷನ್ ಕೂಡ ಮಾಡೋಕೆ ಆಗಲ್ಲ. ಹೀಗಾಗಿ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಪುತ್ರ ತಿಳಿಸಿದ್ದಾರೆ.

ಇನ್ನು ತಂದೆಯವರಿಗೆ ವಯಸ್ಸಾಗಿದೆ. ಎಲ್ಲವನ್ನು ಆ ದೇವರ ಮೇಲೆ ಬಿಟ್ಟಿದ್ದೀವಿ. ಪವಾಡ ನಡೆದರೂ ನಡೆಯಬಹುದು. ಅವರು ಆರೋಗ್ಯವಾಗಿಯೇ ಇದ್ದರು ಆದರೆ ಮನೆಯಲ್ಲೆ ಬಿದ್ದ ಕಾರಣ ಹೀಗಾಗಿದೆ. ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಾ ಇದ್ರು. ಈ ಒತ್ತಡಗಳ ನಡುವೆ ಸರಿಯಾಗಿ ಊಟ, ತಿಂಡಿ ಮಾಡ್ತಾ ಇರ್ಲಿಲ್ಲ. 8 ರಂದು ಶಬರಿಮಲೆಗೂ ಹೋಗುವ ಫ್ಲ್ಯಾನ್ ನಲ್ಲಿದ್ರು.‌ ಆದ್ರೆ ಈಗ ಈ ರೀತಿ ಆಗಿದೆ ಎಂದು ಅವರ ಪುತ್ರ ಲಕ್ಷ್ಮೀಶ್ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

ಚಿತ್ರದುರ್ಗ ನಗರಸಭೆಯ ಆಸ್ತಿ ಸೇರಿದಂತೆ ಇನ್ನಿತರೆ ತೆರಿಗೆಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಗೆ ಅವಕಾಶ : ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗ. ಏ.19:  ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್

error: Content is protected !!