Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಯೋಧ್ಯೆಗೆ ಒಂದೇ ದಿನ ಹರಿದು ಬಂತು 3 ಲಕ್ಷ ಭಕ್ತ ಸಾಗರ..!

---Advertisement---

ಬಾಲರಾಮನನ್ನು ಕಾಣುವ ಉತ್ಸುಕ.. ಬಾಲರಾಮನ ಕಣ್ತುಂಬಿಕೊಳ್ಳುವ ಕೌತುಕ. ರಾಮಲಲ್ಲಾ ಪ್ರತಿಮೆಗೆ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ದಿನ ಕಳೆದಿದೆ. ಅಬ್ಬಬ್ಬಾ ದಿನೇ ದಿನೇ ಅದೆಷ್ಟು ಲಕ್ಷ ಜನ ಅಯೋಧ್ಯೆಗೆ ಬರುತ್ತಿರುವುದು. ನೋಡುವುದಕ್ಕೆ ಎರಡು ಕಣ್ಣು ಸಾಲದು. ನಿನ್ನೆ ಒಂದೇ ದಿನ ಮೂರು ಲಕ್ಷ ಭಕ್ತರು ರಾಮನ ದರ್ಶನ ಪಡೆದಿದ್ದಾರೆ.

ರಾಮನನ್ನು ಕಾಣಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತಚತಾರೆ ಎಂಬ ನಿರೀಕ್ಷೆ ಇತ್ತು. ಪೂಜೆಗೆ ಸಮಯವನ್ನು ನಿಗಧಿ ಮಾಡಲಾಗಿತ್ತು. ಆದರೆ ಆ ಅಮಯವನ್ನು ಮೀರಿ ಜನ ದರ್ಶನಕ್ಕೆ ಬರುತ್ತಿದ್ದಾರೆ. ಉದ್ಘಾಟನೆಯಾದ ಮರುದಿನ ಅಂದರೆ ನಿನ್ನೆಯಿಂದ ರಾಮಲಲ್ಲಾ ದರ್ಶನ ಮಾಡಲು ಭಕ್ತರಿಗೆ ಅವಕಾಶ ನೀಡಲಾಗುತ್ತಿದೆ. ಹೀಗಾಗಿ ನಾ ಮುಂದು ತಾ ಮುಂದು ಅಂತ ಜನ ನುಗ್ಗುತ್ತಿದ್ದಾರೆ. ರಾಮನ ಆಶೀರ್ವಾದಕ್ಕೆ ಪಾತ್ರರಾಗುತ್ತಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಕನಸು ನಿನ್ನೆ ಮೊನ್ನೆಯದ್ದಲ್ಲ. ಐನೂರು ವರ್ಷಗಳ ಸತತ ಹೋರಾಟವಿದೆ. ಈ ಹೋರಾಟಗಳ ನಡುವೆ ಅಯೋಧ್ಯೆಯ ರಾಮಜನ್ಮ ಭೂಮಿ ನಮ್ಮದಾಗಿದ್ದೇ ಅತ್ಯಂತ ಸಂತಸ ಎನ್ನುತ್ತಿದ್ದಾರೆ ಹಿಂದೂಗಳು. ಹೀಗಾಗಿ ಸಂಭ್ರಮದ ಕ್ಷಣವನ್ನು ಕಣ್ತುಂಬಿಕೊಳ್ಳುವುದಕ್ಕೇನೆ ಇಡೀ ದೇಶದ ಹಿಂದೂಗಳು ತುದಿಗಾಲಿನಲ್ಲಿ ನಿಂತಿದ್ದರು. ಆ ಗಳಿಗೆ ಕಡೆಗೂ ಬಂದಾಗಿದೆ. ಆ ಕನಸು ನನಸಾಗಿದೆ. ಹೀಗಾಗಿ ರಾಮಲಲ್ಲಾನ ದರ್ಶನ ಪಡೆಯುವುದಕ್ಕೆ ದಿನಕ್ಕೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಜನ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಬಾಲರಾಮನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment