Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅನಾರೋಗ್ಯದಿಂದ ಶಾಸಕ ಜಿಟಿ ದೇವೇಗೌಡ ಅವರ ಮುದ್ದಿನ ಮೊಮ್ಮಗಳು ನಿಧನ..!

Facebook
Twitter
Telegram
WhatsApp

ಬೆಂಗಳೂರು: ಈ ಮುದ್ದು ಕಂದಮ್ಮನ ಫೋಟೋ ನೋಡುವುದಕ್ಕೇನೆ ಕರುಳು ಹಿಂಡಿ ಬರುತ್ತಿದೆ. ತುಂಬಾ ಚಿಕ್ಕ ವಯಸ್ಸು.. ಬರೀ ಮೂರು ವರ್ಷ.. ಆದರೆ ಇಷ್ಟು ಚಿಕ್ಕ ವಯಸ್ಸಿಗೇನೆ ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಗು ಗೌರಿ ಚಿಜಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಗೌರಿ ಮೈಸೂರಿನ ಚಾಮುಂಡೇಶ್ಚರಿ ಕ್ಷೇತ್ರದ ಶಾಸಕ ಜಿಟಿ ದೇವೇಗೌಡ ಅವರ ಮೊಮ್ಮಗಳು. ಜಿಡಿ ಹರೀಶ್ ಗೌಡ ಪುತ್ರಿ ಗೌರಿ ಕಳೆದ 6 ತಿಂಗಳಿನಿಂದ ಬೋನ್ ಕ್ಯಾನ್ಸರ್ ಗೆ ಒಳಗಾಗಿದ್ದಳು. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾಳೆ.

ಜಿಟಿಡಿ ಮೊಮ್ಮಗಳ ನಿಧನಕ್ಕೆ ಕೇಳಿದವರು ಶಾಕ್ ಆಗಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಮಾಜಿ ಸಚಿವರು, ಆತ್ಮೀಯರು ಆದ ಜಿ.ಟಿ ದೇವೇಗೌಡರ ಮೊಮ್ಮಗಳು ಗೌರಿ ಸಾವಿನ ಸುದ್ದಿ ತಿಳಿದು ಅತೀವ ಸಂಕಟವಾಯಿತು. ಬದುಕಿ ಬಾಳಬೇಕಿದ್ದ ಎಳೆಯ ಕಂದಮ್ಮನ ಅಗಲಿಕೆಯಿಂದ ನೊಂದಿರುವ ಜಿ.ಟಿ ದೇವೇಗೌಡರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತ ಗೌರಿಯ ಆತ್ಮಕ್ಕೆ ಚಿರಶಾಂತಿ ಸಿಗಲಿ, ಮಗುವಿನ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಜಿ.ಟಿ ದೇವೇಗೌಡರು ಹಾಗೂ ಆಕೆಯ ತಂದೆ, ತಾಯಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಮಾಜಿ ಮಂತ್ರಿಗಳಾದ ಶ್ರೀ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಅಸುನೀಗಿರುವ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ. ಆ ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಶ್ರೀ ಜಿ.ಟಿ.ದೇವೇಗೌಡರು, ಅವರ ಪುತ್ರ ಹರೀಶ್‌ ಮತ್ತು ಕುಟುಂಬಕ್ಕೆ ಆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಶಾಸಕರಾದ ಶ್ರೀ @GTDevegowda ಅವರ 3 ವರ್ಷದ ಮೊಮ್ಮಗಳು ಗೌರಿಯ ನಿಧನದ ಸುದ್ದಿ ಕೇಳಿ ನಿಜಕ್ಕೂ ಮನಸ್ಸಿಗೆ ನೋವುಂಟಾಯಿತು. ಬದುಕು ಕೆಲವೊಮ್ಮೆ ತುಂಬಾ ಅನಿಶ್ಚಿತ ಮತ್ತು ಕ್ರೂರ. ಆಕೆಯ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸುವ ಶಕ್ತಿಯನ್ನು ದೇವರು ಆ ಕುಟುಂಬಕ್ಕೆ ಕೊಡಲಿ ಎಂದು ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!