Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಕ್ಕೆ 3 ವರ್ಷ.. ತುಮಕೂರಿನಲ್ಲಿ ಸಾಧನಾ ಸಮಾವೇಶ : ಇದು ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನವಾ..?

---Advertisement---

 

ತುಮಕೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದು ಮೂರು ವರ್ಷವಾಗಿದೆ. ಆದರೆ ಸಿಎಂ ಬದಲಾವಣೆಯ ಚರ್ಚೆ ಮಾತ್ರ ನಿಲ್ಲುತ್ತಿಲ್ಲ. ಇಂಥ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ‌ಶಕ್ತಿ ಪ್ರದರ್ಶನ ಮಾಡುವಂತ ಕೆಲಸವನ್ನ ಮಾಡ್ತಾ ಇರ್ತಾರೆ‌. ತನ್ನ ಜೊತೆಗಿರುವ ಜನ, ಕ್ರೇಜ್ ಬಗ್ಗೆ ಹೈಕಮಾಂಡ್ ನಾಯಕರಿಗೆ ಮನವಿ ಮಾಡಿಕೊಡ್ತಾರೆ. ಇದೀಗ ತುಮಕೂರಿನಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಈ ಮೂಲಕ ಮೇ 20ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದೆ. ಬೃಹತ್ ಸಮಾವೇಶಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಈ ಸಮಾವೇಶದ ಸಂಪೂರ್ಣ ಜವಾಬ್ದಾರಿಯನ್ನು ಗೃಹ ಸಚಿವ ಜಿ ಪರಮೇಶ್ವರ್ ಅವರು ತೆಗೆದುಕೊಂಡಿದ್ದಾರೆ. ಆದರೆ ಇದಾದ ಮೇಲೆ ಸಾಕಷ್ಟು ಚರ್ಚೆ ಕಾಂಗ್ರೆಸ್ ನಲ್ಲಿಯೇ ನಡೆಯುತ್ತಿದೆ. ಇದರ‌ ಲೆಕ್ಕಚಾರವೇನು ಎಂಬ ಚರ್ಚೆಗಳು ಶುರುವಾಗಿದೆ.

ಇನ್ನು ಪಂಚರಾಜ್ಯ ಚುನಾವಣೆಯ ಬಳಿಕ ಸಿಎಂ ಗಾದಿಗೆ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ಅವರನ್ನು ಕರೆಸಿ, ಚರ್ಚೆ ನಡೆಸಿ, ತೀರ್ಮಾನ ಮಾಡು ಅಂತ ಪಟ್ಟು ಹಿಡಿದಿದ್ದಾರೆ. ಖುದ್ದು ಮತ್ತೆ ದೆಹಲಿ ಯಾತ್ರೆಗೆ ಡಿಕೆ ಶಿವಕುಮಾರ್ ಹೊರಡಲಿದ್ದಾರೆ. ಈಗಾಗಲೇ ಸಾಕಷ್ಟು ಸಲ ಹೋಗಿ ಬಂದಿರುವ ಡಿಕೆ ಶಿವಕುಮಾರ್, ಮುಂದಿನ ವಾರ ಮತ್ತೆ ದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಬೆನ್ನಲ್ಲೆ ಸಿದ್ದರಾಮಯ್ಯ ಅವರು ತಮ್ಮ ಆಪ್ತರನ್ನು ಒಟ್ಟುಗೂಡಿಸಿ, ಶಕ್ತಿ ಪ್ರದರ್ಶನಕ್ಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಮೇ 20ರಂದು ಸರ್ಕಾರದ ಸಾಧನಾ ಸಮಾವೇಶ ನಡೆಸಲಿದ್ದಾರೆ. ಲಕ್ಷಾಂತರ ಜನರ ಸೇರಿಸಿ ಸಮಾವೇಶ ಮಾಡಲು ಸಿಎಂ ಆಪ್ತರು ಪ್ಲ್ಯಾನ್ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಕೇಸ್ : ಸುಪ್ರೀಂಕೋರ್ಟ್ ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ವಜಾ

ಚಿತ್ರದುರ್ಗ : ಅಪ್ರಾಪ್ತ ಬಾಲಕನಿಗೆ ಸ್ಕೂಟಿ ನೀಡಿದ್ದ ವಾಹನ ಮಾಲೀಕನಿಗೆ ₹30,000 ದಂಡ, ಶಿಕ್ಷೆ!

‘ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ’ : ಗುರು ಅಂಧಕಾರ ಕಳೆದು ಅರಿವಿನ ದಾರಿ ತೋರುವ ದಿವ್ಯ ಚೇತನ

ಪೊಲೀಸರಿಗೆ ಮಾಸಿಕ ಕಷ್ಟ ಪರಿಹಾರ ಭತ್ಯೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರಿನ  ಲಾಲ್ ಬಾಗ್ ನಲ್ಲಿ ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ವಿವಿಧ ಸ್ಪರ್ಧೆಗಳು, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುವ ಅವಕಾಶಗಳಿಲ್ಲದಂತೆ ಪ್ರಕ್ರಿಯೆಗಳನ್ನು ಪಾರದರ್ಶಕವಾಗಿಸಲು ಸುರಕ್ಷಿತ ಬ್ಲಾಕ್‌ಚೈನ್ ತಂತ್ರಜ್ಞಾನದ ಆಧಾರಿತ ಆನ್ಲೈನ್ ಪರೀಕ್ಷಾ ವ್ಯವಸ್ಥೆ ಅನಿವಾರ್ಯ