Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಕ್ಕೆ 3 ವರ್ಷ.. ತುಮಕೂರಿನಲ್ಲಿ ಸಾಧನಾ ಸಮಾವೇಶ : ಇದು ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನವಾ..?

---Advertisement---

 

ತುಮಕೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದು ಮೂರು ವರ್ಷವಾಗಿದೆ. ಆದರೆ ಸಿಎಂ ಬದಲಾವಣೆಯ ಚರ್ಚೆ ಮಾತ್ರ ನಿಲ್ಲುತ್ತಿಲ್ಲ. ಇಂಥ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ‌ಶಕ್ತಿ ಪ್ರದರ್ಶನ ಮಾಡುವಂತ ಕೆಲಸವನ್ನ ಮಾಡ್ತಾ ಇರ್ತಾರೆ‌. ತನ್ನ ಜೊತೆಗಿರುವ ಜನ, ಕ್ರೇಜ್ ಬಗ್ಗೆ ಹೈಕಮಾಂಡ್ ನಾಯಕರಿಗೆ ಮನವಿ ಮಾಡಿಕೊಡ್ತಾರೆ. ಇದೀಗ ತುಮಕೂರಿನಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಈ ಮೂಲಕ ಮೇ 20ರಂದು ತುಮಕೂರಿನಲ್ಲಿ ಸಾಧನಾ ಸಮಾವೇಶವನ್ನ ಹಮ್ಮಿಕೊಳ್ಳಲಾಗಿದೆ. ಬೃಹತ್ ಸಮಾವೇಶಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಈ ಸಮಾವೇಶದ ಸಂಪೂರ್ಣ ಜವಾಬ್ದಾರಿಯನ್ನು ಗೃಹ ಸಚಿವ ಜಿ ಪರಮೇಶ್ವರ್ ಅವರು ತೆಗೆದುಕೊಂಡಿದ್ದಾರೆ. ಆದರೆ ಇದಾದ ಮೇಲೆ ಸಾಕಷ್ಟು ಚರ್ಚೆ ಕಾಂಗ್ರೆಸ್ ನಲ್ಲಿಯೇ ನಡೆಯುತ್ತಿದೆ. ಇದರ‌ ಲೆಕ್ಕಚಾರವೇನು ಎಂಬ ಚರ್ಚೆಗಳು ಶುರುವಾಗಿದೆ.

ಇನ್ನು ಪಂಚರಾಜ್ಯ ಚುನಾವಣೆಯ ಬಳಿಕ ಸಿಎಂ ಗಾದಿಗೆ ಡಿಕೆ ಶಿವಕುಮಾರ್ ಪಟ್ಟು ಹಿಡಿದಿದ್ದಾರೆ. ಸಿದ್ದರಾಮಯ್ಯ ಅವರನ್ನು ಕರೆಸಿ, ಚರ್ಚೆ ನಡೆಸಿ, ತೀರ್ಮಾನ ಮಾಡು ಅಂತ ಪಟ್ಟು ಹಿಡಿದಿದ್ದಾರೆ. ಖುದ್ದು ಮತ್ತೆ ದೆಹಲಿ ಯಾತ್ರೆಗೆ ಡಿಕೆ ಶಿವಕುಮಾರ್ ಹೊರಡಲಿದ್ದಾರೆ. ಈಗಾಗಲೇ ಸಾಕಷ್ಟು ಸಲ ಹೋಗಿ ಬಂದಿರುವ ಡಿಕೆ ಶಿವಕುಮಾರ್, ಮುಂದಿನ ವಾರ ಮತ್ತೆ ದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಈ ಬೆನ್ನಲ್ಲೆ ಸಿದ್ದರಾಮಯ್ಯ ಅವರು ತಮ್ಮ ಆಪ್ತರನ್ನು ಒಟ್ಟುಗೂಡಿಸಿ, ಶಕ್ತಿ ಪ್ರದರ್ಶನಕ್ಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಮೇ 20ರಂದು ಸರ್ಕಾರದ ಸಾಧನಾ ಸಮಾವೇಶ ನಡೆಸಲಿದ್ದಾರೆ. ಲಕ್ಷಾಂತರ ಜನರ ಸೇರಿಸಿ ಸಮಾವೇಶ ಮಾಡಲು ಸಿಎಂ ಆಪ್ತರು ಪ್ಲ್ಯಾನ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...