ಇಂದಿನಿಂದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ 30ನೇ ವರ್ಷದ ವಾರ್ಷಿಕೋತ್ಸವ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮಾ. 21 : ನಗರದ ಆನೆ ಬಾಗಿಲ ಬಳಿಯಲ್ಲಿನ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿ (ರಿ) ವತಿಯಿಂದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ 30ನೇ ವರ್ಷದ ವಾರ್ಷಿಕೋತ್ಸವ ಹಾಗೂ ಕಳಸಾಭಿಷೇಕ ಮಾ. 21 ರಿಂದ 23ರವರೆಗೆ ನಡೆಯಲಿದೆ ಎಂದು  ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿ ತಿಳಿಸಿದೆ.

ಮಾ.21ನೇ ಶುಕ್ರವಾರ ಸಂಜೆ ರಾಕ್ಷೋಘ್ನ ಹೋಮ, ವಾಸ್ತು ಹೋಮ, ದುರ್ಗಾ ದೀಪ ನಮಸ್ಕಾರ ಪೂಜೆ ನಡೆಸಲಾಯಿತು. ಮಾ.22 ರ ಶನಿವಾರ ಬೆಳಿಗ್ಗೆ ನವಗ್ರಹ ಶಾಂತಿ, ಗಂಗಾ ಶಾಂತಿ, ನಾಗಶಾಂತಿ ಸಂಜೆ 5.30ಕ್ಕೆ ಅಧಿವಾಸದ ಹೋಮ, ಬ್ರಹ್ಮಕಲಶ ಸ್ಥಾಪನೆ, ಅಷ್ಟಾವಧಾನ ಸೇವೆ, ನಂತರ ಕಳಸ ಸ್ಥಾಪನೆ ಮಾಡಲಾಗುವುದು. ಕಳಸಕ್ಕೆ ಹಣ ಕೊಟ್ಟವರ ಹೆಸರು ಗೋತ್ರ, ನಕ್ಷತ್ರದ ಮೂಲಕ ಸಂಕಲ್ಪ ಮಾಡಿಸಲಾಗುವುದು ಪುರೋಹಿತರು ಕಳಸವನ್ನು ಮುಟ್ಟಿಸಿ ಮೂಲ ದೇವರಿಗೆ ಅಭಿಷೇಕ ಮಾಡಿ ನಂತರ ಕಳಸವನ್ನು ದಂಪತಿಗಳಿಗೆ ನೀಡಲಾಗುವುದು.

ಮಾ. 23 ನೇ ಭಾನುವಾರ ಕಲಾವೃದ್ಧಿ ಹೋಮ, ಶಾಂತಿ ಪ್ರಾಯಶ್ಚಿತ್ತ, ಹೋಮಾದಿಗಳು ಬ್ರಹ್ಮ ಕಲಶಾಭಿಷೇಕ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮಧ್ಯಾಹ್ನ 1.00 ರಿಂದ ಪೂಜಾ ಸೇವಾಕರ್ತರು ಹಾಗೂ ಸಮಸ್ತ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಪೂಜಾ ಕಾರ್ಯಕ್ರಮ ನಡೆಸಲಾಗುವುದು.

ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾಧಿಗಳು ಆಗಮಿಸುವುದರ ಮೂಲಕ ವಿನಾಯಕನ ಕೃಪೆಗೆ ಪಾತ್ರರಾಗುವಂತೆ ಶ್ರೀ ಪ್ರಸನ್ನ ಗಣಪತಿ ಸೇವಾ ಸಮಿತಿಯವರು ಕೋರಿದ್ದಾರೆ.

suddionenews

Recent Posts

ಮೊಳಕಾಲ್ಮೂರು : ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು…!

ಸುದ್ದಿಒನ್, ಮೊಳಕಾಲ್ಮೂರು, ಏಪ್ರಿಲ್. 01 : ತಾಲೂಕಿನ ಬೊಮ್ಮಕ್ಕನಹಳ್ಳಿಯಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ…

17 minutes ago

ಈ ರಾಶಿಯವರಿಗೆ ಗುರು ಬಲ ಬಂದಿದೆ ಮದುವೆ ಸಡಗರ ಕಂಡಿತು

ಈ ರಾಶಿಯವರಿಗೆ ಗುರು ಬಲ ಬಂದಿದೆ ಮದುವೆ ಸಡಗರ ಕಂಡಿತು, ಈ ರಾಶಿಯವರು ಯಾವುದೇ ಕಾರಣಕ್ಕೂ ಉದ್ಯೋಗದ ಸ್ಥಳ ಬದಲಾಯಿಸಬಾರದು,…

4 hours ago

ಈ ಪುಟಾಣಿಯ ಚಿಕಿತ್ಸೆಗೆ 16 ಕೋಟಿಯ ಅಗತ್ಯ ; ಕೈಜೋಡಿಸಿದ ಕಿಚ್ಚ ಸುದೀಪ್

ಬೆಂಗಳೂರು; ಮಕ್ಕಳೆಂದರೆ ಯಾವ ಪೋಷಕರಿಗೆ ತಾನೇ ಇಷ್ಟ ಇಲ್ಲ ಹೇಳಿ. ಮಕ್ಕಳಾದ ಮೇಲೆ ಅವರ ಉಜ್ವಲ ಭವಿಷ್ಯಕ್ಕಾಗಿಯೇ ಹೋರಾಡುತ್ತಾರೆ. ಅವರ…

14 hours ago

ಚಿತ್ರದುರ್ಗ : ಯುಗಾದಿ ಹಬ್ಬ ಆಚರಣೆ : ಚಂದ್ರನನ್ನು ಕಣ್ತುಂಬಿಕೊಂಡ ಜನತೆ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ಯುಗಾದಿ ಹಬ್ಬವನ್ನು ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಎರಡು ದಿನ ಸಂಭ್ರಮದಿಂದ ಆಚರಿಸಲಾಯಿತು.…

15 hours ago

ಚಿತ್ರದುರ್ಗ : ಯುಗಾದಿ ವೇಳೆ ಇಸ್ಪೀಟ್ ಜೂಜಾಟ ಅಡ್ಡೆಗಳ ಮೇಲೆ ಪೊಲೀಸ್ ದಾಳಿ : 575 ಜನ ಮತ್ತು 7 ಲಕ್ಷ ವಶಕ್ಕೆ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ಜಿಲ್ಲೆಯಾದ್ಯಂತ ಯುಗಾದಿ ಹಬ್ಬದ ಪ್ರಯುಕ್ತ ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ಮಾರ್ಚ್…

16 hours ago

ಚಿತ್ರದುರ್ಗ : ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಯುಗಾದಿ ಹಬ್ಬ ಆಚರಣೆ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ಗೋನೂರು ಸಮೀಪವಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ವಿಶೇಷವಾದ…

16 hours ago