Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ 30ನೇ ಫಲ-ಪುಷ್ಪ ಪ್ರದರ್ಶನ : ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು : ನೀವು ಭಾಗವಹಿಸಬೇಕೆ ? ಹಾಗಾದರೆ ಇಲ್ಲಿದೆ ಮಾಹಿತಿ…!

Facebook
Twitter
Telegram
WhatsApp

 

ಮಾಹಿತಿ ಕೃಪೆ 
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜನವರಿ 08)  : ಫಲ ಪುಷ್ಪ ಪ್ರದರ್ಶನ ಅಂಗವಾಗಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ತೋಟಗಾರಿಕೆ ಸಂಘ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ತೋಟಗಾರಿಕೆ ಆವರಣದಲ್ಲಿ ಫೆಬ್ರವರಿ 9 ರಂದು 25 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಬೆಳೆಗ್ಗೆ 10 ಗಂಟೆಗೆ ಮ್ಯೂಸಿಕಲ್ ಜೇರ್, 11.30 ಮಡಿಕೆ ಹೊಡೆಯುವ ಸ್ಪರ್ಧೆಗಳು ನಡೆಯಲಿವೆ.

ಫೆಬ್ರವರಿ 10 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರಗೆ ತರಕಾರಿ ಕೆತ್ತನೆ ಮತ್ತು ಹೂವುಗಳ ಜೋಡಣಿ  ವಿವಿಧ ರಂಗೋಲಿ ಸ್ಪರ್ಧೆ ಜರುಗಲಿವೆ. ಸ್ಪರ್ಧಿಗಳು ರಂಗೋಲಿ ಹಾಕಲು ಹಣ್ಣು, ತರಕಾರಿ ಮತ್ತು ಹೂಗಳನ್ನು, ಕಾಳುಗಳನ್ನು ಮಾತ್ರ ಉಪಯೋಗಿಸಬೇಕು.

ಫೆ.11 ರಂದು ಬೆಳೆಗ್ಗೆ 11 ರಿಂದ 12 ಗಂಟೆವರಗೆ 1 ಮತ್ತು 2 ತರಗತಿ ವಿದ್ಯಾರ್ಥಿಗಳಿಗೆ ಹಣ್ಣು ಮತ್ತು ತರಕಾರಿಗಳನ್ನು ಗುರುತಿಸುವ, ಬೆಳೆಗ್ಗೆ 12 ರಿಂದ 12.30ರ ವರೆಗೆ 5 ರಿಂದ 7 ಹಾಗೂ 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಎರೆಡು ವಿಭಾಗದಲ್ಲಿ ಚಿತ್ರಕಲಾ ಸ್ಪರ್ಧೆ, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 2 ರಿಂದ 3 ಗಂಟೆವರಗೆ, ಆಶುಭಾಷಣ ಮತ್ತು ಪ್ರಬಂಧ ಸ್ಪರ್ಧೆ, ಸಂಜೆ 6:30ಕ್ಕೆ 1 ರಿಂದ 4 ತರಗತಿ ವಿದ್ಯಾರ್ಥಿಗಳಿಗೆ ಹೂವು-ಹಣ್ಣು, ಸೊಪ್ಪು, ತರಕಾರಿಗಳನ್ನು ಬಳಸಿದ ಫ್ಯಾನ್ಸಿ ಡ್ರಸ್ ಸ್ಪರ್ಧೆ, ಸಂಜೆ 5 ರಿಂದ 7 ಗಂಟೆವರೆಗೆ 8 ರಿಂದ 10 ತರಗತಿ ವಿದ್ಯಾರ್ಥಿಗಳಿಗೆ ವೈಯಕ್ತಿಕ ವಿಭಾಗದಲ್ಲಿ ಜನಪದ ಮತ್ತು ಭಾವಗೀತೆ ಸ್ಪರ್ಧೆಗಳು ಜರುಗಲಿವೆ.

ಫೆ.11 ರಂದು ಸಾರ್ವಜನಿಕರಿಗಾಗಿ ಮನೆ ಆವರಣದಲ್ಲಿ ನಡೆಯುವ ಸ್ಪರ್ಧೆಗಳ ಅಂಗವಾಗಿ ತೀರ್ಪುಗಾರರು ಸ್ಥಳಗಳಿಗೆ ತೆರಳಿ, ವಿವಿಧ ಜಾತಿಯ ಅಲಂಕಾರಿಕ ಕುಂಡಗಳ ಜೊಡಣೆ, ಮನೆ ಮತ್ತು ಸಂಸ್ಥೆಗಳ ಆವರಣದಲ್ಲಿ ಉದ್ಯಾನವನಗಳ ಸ್ಪರ್ಧೆಯ ತೀರ್ಪಗಳನ್ನು ಕೈಗೊಳ್ಳುವರು.  ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7022100739, 9035583330 ಹಾಗೂ 9886991508 ಸಂಪರ್ಕಿಸಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೃತ ನೇಹಾ ಮನೆಗೆ ಮುಸ್ಲಿಂ ಮುಖಂಡರ ಭೇಟಿ : ನಿರಂಜನ ದೇಶಪಾಂಡೆಗೆ ಸಾಂತ್ವನ

ಹುಬ್ಬಳ್ಳಿ: ನೇಹಾ ಎಂಬ ಎಂಸಿಎ ವಿದ್ಯಾರ್ಥಿನಿಯನ್ನು ಫಯಾಜ್ ನಿನ್ನೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯನ್ನು ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಹೋರಾಟಗಳು ಕೂಡ ನಡೆದಿವೆ. ಇದೀಗ ಮುಸ್ಲಿಂ ಮುಖಂಡರು

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

error: Content is protected !!