Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ 30ನೇ ಫಲ-ಪುಷ್ಪ ಪ್ರದರ್ಶನ : ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು : ನೀವು ಭಾಗವಹಿಸಬೇಕೆ ? ಹಾಗಾದರೆ ಇಲ್ಲಿದೆ ಮಾಹಿತಿ…!

---Advertisement---

 

ಮಾಹಿತಿ ಕೃಪೆ 
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜನವರಿ 08)  : ಫಲ ಪುಷ್ಪ ಪ್ರದರ್ಶನ ಅಂಗವಾಗಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ತೋಟಗಾರಿಕೆ ಸಂಘ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ತೋಟಗಾರಿಕೆ ಆವರಣದಲ್ಲಿ ಫೆಬ್ರವರಿ 9 ರಂದು 25 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಬೆಳೆಗ್ಗೆ 10 ಗಂಟೆಗೆ ಮ್ಯೂಸಿಕಲ್ ಜೇರ್, 11.30 ಮಡಿಕೆ ಹೊಡೆಯುವ ಸ್ಪರ್ಧೆಗಳು ನಡೆಯಲಿವೆ.

ಫೆಬ್ರವರಿ 10 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರಗೆ ತರಕಾರಿ ಕೆತ್ತನೆ ಮತ್ತು ಹೂವುಗಳ ಜೋಡಣಿ  ವಿವಿಧ ರಂಗೋಲಿ ಸ್ಪರ್ಧೆ ಜರುಗಲಿವೆ. ಸ್ಪರ್ಧಿಗಳು ರಂಗೋಲಿ ಹಾಕಲು ಹಣ್ಣು, ತರಕಾರಿ ಮತ್ತು ಹೂಗಳನ್ನು, ಕಾಳುಗಳನ್ನು ಮಾತ್ರ ಉಪಯೋಗಿಸಬೇಕು.

ಫೆ.11 ರಂದು ಬೆಳೆಗ್ಗೆ 11 ರಿಂದ 12 ಗಂಟೆವರಗೆ 1 ಮತ್ತು 2 ತರಗತಿ ವಿದ್ಯಾರ್ಥಿಗಳಿಗೆ ಹಣ್ಣು ಮತ್ತು ತರಕಾರಿಗಳನ್ನು ಗುರುತಿಸುವ, ಬೆಳೆಗ್ಗೆ 12 ರಿಂದ 12.30ರ ವರೆಗೆ 5 ರಿಂದ 7 ಹಾಗೂ 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಎರೆಡು ವಿಭಾಗದಲ್ಲಿ ಚಿತ್ರಕಲಾ ಸ್ಪರ್ಧೆ, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ 2 ರಿಂದ 3 ಗಂಟೆವರಗೆ, ಆಶುಭಾಷಣ ಮತ್ತು ಪ್ರಬಂಧ ಸ್ಪರ್ಧೆ, ಸಂಜೆ 6:30ಕ್ಕೆ 1 ರಿಂದ 4 ತರಗತಿ ವಿದ್ಯಾರ್ಥಿಗಳಿಗೆ ಹೂವು-ಹಣ್ಣು, ಸೊಪ್ಪು, ತರಕಾರಿಗಳನ್ನು ಬಳಸಿದ ಫ್ಯಾನ್ಸಿ ಡ್ರಸ್ ಸ್ಪರ್ಧೆ, ಸಂಜೆ 5 ರಿಂದ 7 ಗಂಟೆವರೆಗೆ 8 ರಿಂದ 10 ತರಗತಿ ವಿದ್ಯಾರ್ಥಿಗಳಿಗೆ ವೈಯಕ್ತಿಕ ವಿಭಾಗದಲ್ಲಿ ಜನಪದ ಮತ್ತು ಭಾವಗೀತೆ ಸ್ಪರ್ಧೆಗಳು ಜರುಗಲಿವೆ.

ಫೆ.11 ರಂದು ಸಾರ್ವಜನಿಕರಿಗಾಗಿ ಮನೆ ಆವರಣದಲ್ಲಿ ನಡೆಯುವ ಸ್ಪರ್ಧೆಗಳ ಅಂಗವಾಗಿ ತೀರ್ಪುಗಾರರು ಸ್ಥಳಗಳಿಗೆ ತೆರಳಿ, ವಿವಿಧ ಜಾತಿಯ ಅಲಂಕಾರಿಕ ಕುಂಡಗಳ ಜೊಡಣೆ, ಮನೆ ಮತ್ತು ಸಂಸ್ಥೆಗಳ ಆವರಣದಲ್ಲಿ ಉದ್ಯಾನವನಗಳ ಸ್ಪರ್ಧೆಯ ತೀರ್ಪಗಳನ್ನು ಕೈಗೊಳ್ಳುವರು.  ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ಮತ್ತು ನೆನಪಿನ ಕಾಣಿಕೆ ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7022100739, 9035583330 ಹಾಗೂ 9886991508 ಸಂಪರ್ಕಿಸಬಹುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...