Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳ ಡೇ-ಕೇರ್ ಸೆಂಟರ್‌ನಲ್ಲಿ 24 ಮಕ್ಕಳು ಸೇರಿದಂತೆ 34 ಮಂದಿಯ ಮಾರಣಹೋಮ

Facebook
Twitter
Telegram
WhatsApp

 

ಸುದ್ದಿಒನ್ ವೆಬ್ ಡೆಸ್ಕ್

ಥಾಯ್ಲೆಂಡ್‌ನ ಈಶಾನ್ಯ ಪ್ರಾಂತ್ಯದ ನೊಂಗ್ಬುವಾ ಲ್ಯಾಂಫು ಪಟ್ಟಣದ ಮಕ್ಕಳ ಡೇ-ಕೇರ್ ಸೆಂಟರ್‌ನಲ್ಲಿ (ನರ್ಸರಿ) ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 36 ಜನರು ಸಾವನ್ನಪ್ಪಿದ್ದಾರೆ ಮತ್ತು ಬಂದೂಕು ಧಾರಿ ಸ್ವತಃ ಗುಂಡ ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ.

ಮೂಲಗಳ ಪ್ರಕಾರ, ಬಂದೂಕುಧಾರಿ ಮಾಜಿ ಪೊಲೀಸ್ ಅಧಿಕಾರಿ
34 ವರ್ಷ ವಯಸ್ಸಿನ ಮಾಜಿ ಅಧಿಕಾರಿಯನ್ನು ಜೂನ್‌ನಲ್ಲಿ ಮಾದಕವಸ್ತು ಸೇವನೆಗಾಗಿ ವಜಾಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಲಿಯಾದವರಲ್ಲಿ 24 ಮಕ್ಕಳು ಸೇರಿದಂತೆ ಕನಿಷ್ಠ 34 ಮಂದಿ ಸತ್ತಿದ್ದಾರೆ ಆದರೆ ವಿವರಗಳು ಇನ್ನೂ ತಿಳಿಯಬೇಕಿದೆ ಎಂದು ಉಪ ಪೊಲೀಸ್ ವಕ್ತಾರ ಅರ್ಚನ್ ಕ್ರೈಟಾಂಗ್ ತಿಳಿಸಿದರು. ಘಟನೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.

ಅಂತರ್ಜಾಲದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಸಂತ್ರಸ್ತರ ಕುಟುಂಬಗಳು ತಮ್ಮ ಪ್ರೀತಿಪಾತ್ರರ ಸಾವಿನಿಂದ ಶೋಕಿಸುತ್ತಿರುವುದನ್ನು ಕಾಣಬಹುದು. ಕೆಲವರು ಗಾಯಗೊಂಡವರನ್ನು ಆಂಬ್ಯುಲೆನ್ಸ್‌ಗೆ ಕರೆದೊಯ್ಯುವುದನ್ನು ಕಾಣಬಹುದು.

ಶಂಕಿತ ಗುಂಡಿಗೆ ಬಲಿಯಾದವರಲ್ಲಿ 22 ಮಕ್ಕಳಿದ್ದರು.  ಬಂದೂಕುಧಾರಿ ಊಟದ ಸಮಯದಲ್ಲಿ ಬಂದಾಗ ಸುಮಾರು 30 ಮಕ್ಕಳು ಕೇಂದ್ರದಲ್ಲಿದ್ದರು.ಎಂಟು ತಿಂಗಳ ಗರ್ಭಿಣಿಯಾಗಿದ್ದ ಶಿಕ್ಷಕಿ ಸೇರಿದಂತೆ ನಾಲ್ಕೈದು ಸಿಬ್ಬಂದಿಗೆ ವ್ಯಕ್ತಿ ಮೊದಲು ಗುಂಡು ಹಾರಿಸಿದ್ದಾನೆ.‌ ಮೊದಲಿಗೆ ಇದು ಪಟಾಕಿ ಎಂದು ಜನರು ಭಾವಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾದ ವೀಡಿಯೊಗಳು ಈಶಾನ್ಯ ಪ್ರಾಂತ್ಯದ ನೋಂಗ್ ಬುವಾ ಲ್ಯಾಂಫುವಿನ ಉತೈ ಸಾವನ್ ಪಟ್ಟಣದ ಮಧ್ಯಭಾಗದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವ ಮಕ್ಕಳ ದೇಹಗಳನ್ನು ನೋಡಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೃತ ನೇಹಾ ಮನೆಗೆ ಮುಸ್ಲಿಂ ಮುಖಂಡರ ಭೇಟಿ : ನಿರಂಜನ ದೇಶಪಾಂಡೆಗೆ ಸಾಂತ್ವನ

ಹುಬ್ಬಳ್ಳಿ: ನೇಹಾ ಎಂಬ ಎಂಸಿಎ ವಿದ್ಯಾರ್ಥಿನಿಯನ್ನು ಫಯಾಜ್ ನಿನ್ನೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯನ್ನು ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಹೋರಾಟಗಳು ಕೂಡ ನಡೆದಿವೆ. ಇದೀಗ ಮುಸ್ಲಿಂ ಮುಖಂಡರು

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

error: Content is protected !!