ಹಾಸನದಲ್ಲಿ ಊಟ ಸೇವಿಸಿದ ಬಳಿಕ 35 ಸೈನಿಕರು ಅಸ್ವಸ್ಥ.. ಆಸ್ಪತ್ರೆಗೆ ದಾಖಲು

suddionenews
1 Min Read

ಹಾಸನ: ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಇದ್ದಕ್ಕಿದ್ದ ಹಾಗೇ 35 ಸೈನಿಕರು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಸದ್ಯ ಅವರೆಲ್ಲರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಕಲೇಶಪುರ ತಾಲೂಕಿನ ಕುಡುಗರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಊಟ ಸೇವಿಸಿದ ಬಳಿಕ ವಾಂತಿಯಾಗಿ ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥಗೊಂಡ ಸೈನಿಕರನ್ನು ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಿದ ಬಳಿಕ ಸೈನಿಕರು ಸುಧಾರಿಸಿಕೊಳ್ಳುತ್ತಿದ್ದಾರೆ. ಆರೋಗ್ಯ ಸರಿಯಾಗುವ ತನಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಾರೆ.

ಸೈನಿಕರ ಊಟದಲ್ಲಿ ಏನಿತ್ತು ಎಂಬುದು ಇನ್ನು ಕೂಡ ತಿಳಿದು ಬಂದಿಲ್ಲ. ವಾಹನ ಚಾಲನ ತರಬೇತಿಗೆ ಎಂದು 35 ಸೈನಿಕರು ಬಂದಿದ್ದರು. ಈ ವೇಳೆ ಕ್ಯಾಂಪ್ ನಲ್ಲಿಯೇ ಮಾಡಿದ್ದ ಆಹಾರವನ್ನು ಸೇವಿಸಿಯೇ ಅಸ್ವಸ್ಥರಾಗಿದ್ದಾರೆ. ಸದ್ಯ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸೈನಿಕರ ಆರೋಗ್ಯವನ್ನು ವಿಚಾರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *