ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯಲ್ಲಿ ಭಾರೀ ಗೋಲ್ಮಾಲ್.. ಸಿಎಜಿ ವರದಿಯಲ್ಲಿ ಇರೋದೇನು..?

 

ಆಯುಷ್ಮಾನ್ ಭಾರತ್ ಯೋಜನೆ ನರೇಂದ್ರ ಮೋದಿ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಆದರೆ ಇದರಲ್ಲೂ ಗೋಲ್ಮಾಲ್‌ ನಡೆದಿದೆ ಎಂದು ಸಿಎಜಿ ವರದಿ ಸಲ್ಲಿಸಿದೆ. ಬಿಪಿಎಲ್ ಕಾರ್ಡುದಾರ ಕುಟುಂಬಗಳಿಗೆ ಸುಮಾರು ಐದು ಲಕ್ಷದವರೆಗಿನ ಚಿಕಿತ್ಸ ಎಉಚಿತವಾಗಿಸುವ ಯೋಜನೆ ಇದಾಗಿದೆ.

ಆಡಿಟರ್ ಅಂಡ್ ಕಂಟ್ರೋಲರ್ ಸಂಪೂರ್ಣವಾಗಿ ಈ ಯೋಜನೆಯನ್ನು ಪರಿಶೀಲಿಸಿದ್ದಾರೆ. ಸಿಎಜಿ ವರದಿ ಪ್ರಕಾರ, ಆಯುಷ್ಮಾನ್ ಯೋಜನೆಯ 7.5 ಲಕ್ಷ ಫಲಾನುಭವಿಗಳ ಮೊಬೈಲ್ ಸಂಖ್ಯೆ ಒಂದೇ ಆಗಿದೆ. ಅದು 9999999999 ಈ ಸಂಖ್ಯೆಯನ್ನು ಆಯುಷ್ಮಾನ್ ಯೋಜನೆಯ ಫಲಾನುಭವಿಗಳ ಸಂಖ್ಯೆಯಾಗಿದೆ. ಒಂದೇ ನಂಬರ್ ನೀಡಿರುವುದೇ ಆಶ್ಚರ್ಯಕ್ಕೆ ಕಾರಣವಾಗಿದೆ.

ಮೊಬೈಲ್ ಸಂಖ್ಯೆಯಲ್ಲಿ ಗೋಲ್ಮಾಲ್ ಕಂಡು ಹಿಡಿಯಲಾಗಿದೆ. ತಪ್ಪು ಮೊಬೈಲ್ ಸಂಖ್ಯೆ ನೀಡಲಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ದೇಶದ ಬಿಪಿಎಲ್‌ ಕುಟುಂಬಗಳಿಗೆ 5 ಲಕ್ಷ ರೂಪಾಯಿವರೆಗೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಸರ್ಕಾರದ ಆರೋಗ್ಯ ವಿಮಾ ಯೋಜನೆಯಲ್ಲಿ ಫಲಾನುಭವಿಗಳು ಸರ್ಕಾರಿ ಆಸ್ಪತ್ರೆಗಳು, ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ 5 ಲಕ್ಷ ರೂಪಾಯಿವರೆಗೂ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಈ ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಶಸ್ತ್ರಚಿಕಿತ್ಸೆಗೂ ಅವಕಾಶ ಇದೆ. ಆದರೆ ಈ ಮಹತ್ವದ ಯೋಜನೆಯಲ್ಲೇ ಗೋಲ್ ಮಾಲ್ ನಡೆದಿರೋದು ಅಚ್ಚರಿಯ ಸಂಗತಿಯಾಗಿದೆ. ಕರ್ನಾಟಕದಲ್ಲೂ ಸಾವಿರಾರು ಜನ ಆಯುಷ್ಮಾನ್ ಭಾರತ್ ಯೋಜನೆ ಕಾರ್ಡ್‌ ಮಾಡಿಸಿಕೊಂಡಿದ್ದಾರೆ

Share This Article
Leave a Comment

Leave a Reply

Your email address will not be published. Required fields are marked *