Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯಲ್ಲಿ ಭಾರೀ ಗೋಲ್ಮಾಲ್.. ಸಿಎಜಿ ವರದಿಯಲ್ಲಿ ಇರೋದೇನು..?

---Advertisement---

 

ಆಯುಷ್ಮಾನ್ ಭಾರತ್ ಯೋಜನೆ ನರೇಂದ್ರ ಮೋದಿ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಆದರೆ ಇದರಲ್ಲೂ ಗೋಲ್ಮಾಲ್‌ ನಡೆದಿದೆ ಎಂದು ಸಿಎಜಿ ವರದಿ ಸಲ್ಲಿಸಿದೆ. ಬಿಪಿಎಲ್ ಕಾರ್ಡುದಾರ ಕುಟುಂಬಗಳಿಗೆ ಸುಮಾರು ಐದು ಲಕ್ಷದವರೆಗಿನ ಚಿಕಿತ್ಸ ಎಉಚಿತವಾಗಿಸುವ ಯೋಜನೆ ಇದಾಗಿದೆ.

ಆಡಿಟರ್ ಅಂಡ್ ಕಂಟ್ರೋಲರ್ ಸಂಪೂರ್ಣವಾಗಿ ಈ ಯೋಜನೆಯನ್ನು ಪರಿಶೀಲಿಸಿದ್ದಾರೆ. ಸಿಎಜಿ ವರದಿ ಪ್ರಕಾರ, ಆಯುಷ್ಮಾನ್ ಯೋಜನೆಯ 7.5 ಲಕ್ಷ ಫಲಾನುಭವಿಗಳ ಮೊಬೈಲ್ ಸಂಖ್ಯೆ ಒಂದೇ ಆಗಿದೆ. ಅದು 9999999999 ಈ ಸಂಖ್ಯೆಯನ್ನು ಆಯುಷ್ಮಾನ್ ಯೋಜನೆಯ ಫಲಾನುಭವಿಗಳ ಸಂಖ್ಯೆಯಾಗಿದೆ. ಒಂದೇ ನಂಬರ್ ನೀಡಿರುವುದೇ ಆಶ್ಚರ್ಯಕ್ಕೆ ಕಾರಣವಾಗಿದೆ.

ಮೊಬೈಲ್ ಸಂಖ್ಯೆಯಲ್ಲಿ ಗೋಲ್ಮಾಲ್ ಕಂಡು ಹಿಡಿಯಲಾಗಿದೆ. ತಪ್ಪು ಮೊಬೈಲ್ ಸಂಖ್ಯೆ ನೀಡಲಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ದೇಶದ ಬಿಪಿಎಲ್‌ ಕುಟುಂಬಗಳಿಗೆ 5 ಲಕ್ಷ ರೂಪಾಯಿವರೆಗೂ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಸರ್ಕಾರದ ಆರೋಗ್ಯ ವಿಮಾ ಯೋಜನೆಯಲ್ಲಿ ಫಲಾನುಭವಿಗಳು ಸರ್ಕಾರಿ ಆಸ್ಪತ್ರೆಗಳು, ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ 5 ಲಕ್ಷ ರೂಪಾಯಿವರೆಗೂ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಈ ಆಯುಷ್ಮಾನ್ ಭಾರತ್ ಯೋಜನೆ ಮೂಲಕ ಶಸ್ತ್ರಚಿಕಿತ್ಸೆಗೂ ಅವಕಾಶ ಇದೆ. ಆದರೆ ಈ ಮಹತ್ವದ ಯೋಜನೆಯಲ್ಲೇ ಗೋಲ್ ಮಾಲ್ ನಡೆದಿರೋದು ಅಚ್ಚರಿಯ ಸಂಗತಿಯಾಗಿದೆ. ಕರ್ನಾಟಕದಲ್ಲೂ ಸಾವಿರಾರು ಜನ ಆಯುಷ್ಮಾನ್ ಭಾರತ್ ಯೋಜನೆ ಕಾರ್ಡ್‌ ಮಾಡಿಸಿಕೊಂಡಿದ್ದಾರೆ

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment