Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

396ನೇ ಶಿವಾಜಿ ಜಯಂತಿ : ಜನಪರ ಆಡಳಿತಗಾರ ಛತ್ರಪತಿ ಶಿವಾಜಿ : ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ

---Advertisement---

 

ಚಿತ್ರದುರ್ಗ (ಫೆ..19) : ಕೃಷ್ಣದೇವರಾಯನ ತರುವಾಯ ಭಾರತದಲ್ಲಿ ಬೃಹತ್ ಹಿಂದು ಸಾಮ್ರಾಜ್ಯ ಕಟ್ಟಿದ ನಾಯಕ ಛತ್ರಪತಿ ಶಿವಾಜಿ. ಜನರ ಮೇಲೆ ಹೆಚ್ಚಿನ ಹೊರೆಯಾಗದಂತೆ, ತೆರಿಗೆ ಪದ್ದತಿ ಅಳವಡಿಸಿಕೊಂಡು ಜನಪರ ಆಡಳಿತ ನೆಡಿಸಿದ ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ ಹಾಗೂ ಜಿಲ್ಲಾ ಮರಾಠ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ, ನಗರದ ತ.ರಾ.ಸು ರಂಗ ಮಂದಿರದಲ್ಲಿ ಭಾನುವಾರ ಆಯೋಜಿಸಲಾದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉತ್ತಮ ಸೈನ್ಯ ಸಂಘಟನೆ, ದೇಶಪ್ರೇಮಿ ಹಾಗೂ‌ ಆಡಳಿತಗಾರನಾಗಿ‌‌ ಶಿವಾಜಿ‌ ರೂಪುಗೊಳ್ಳಲು ತಾಯಿ ಜಿಜಾಬಾಯಿ ಕಾರಣ.‌ ಚಿಕ್ಕದಿನಿಂದಲೇ ಮಹಾಭಾರತ ಹಾಗೂ ರಾಮಯಣ ಕಥೆಗಳನ್ನು ಶಿವಾಜಿಗೆ ಹೇಳಿವುದರ ಮೂಲಕ ದೇಶದ ಸಂಸ್ಕೃತಿಯನ್ನು ಪರಿಚಯ ಮಾಡಿಸಿದಳು. ತಾಯಿ‌ ಜಿಜಾಬಾಯಿ ಒತ್ತಾಸೆಯಂತೆ ಶಿವಾಜಿ ಮರಾಠ ಸಾಮ್ರಾಜ್ಯ ಸ್ಥಾಪನೆ ಮಾಡಿದ. ಶಿವಾಜಿ ಅನುಸರಿಸದ ಗೆರಿಲ್ಲಾ ಯುದ್ಧ ತಂತ್ರ ಜೊತೆಗೆ ಶಕ್ತಿ ಮತ್ತು ಯುಕ್ತಿಯಿಂದಾಗಿ ಸಾಮ್ರಾಜ್ಯ ವಿಸ್ತರಣೆಯಾಯಿತು. ಗೆರಿಲ್ಲಾ ಮಾದರಿ ಯುದ್ದ ತಂತ್ರವನ್ನು ಇಂದಿಗೂ ವಿಶ್ವದ ನಾನಾಕಡೆ ಬಳಸುವುದನ್ನು ನಾವು ಕಾಣಬಹುದು ಎಂದರು.

ಐ.ಎನ್.ಒ ರಾಜ್ಯ ಮುಖ್ಯ ಸಂಚಾಲಕ ಬಿ.ಎಸ್. ಮಂಜುನಾಥಸ್ವಾಮಿ ವಿಶೇಷ ಉಪನ್ಯಾಸ ನೀಡಿ, ಮೊಘಲ್ ಹಾಗೂ ಆದಿಲ್‌ಷಾಯಿಗಳಿಗೆ‌ ತಲೆ ಬಾಗದೇ ಶಿವಾಜಿ ಹಿಂದೂ ಸಾಮ್ರಾಜ್ಯ ಸ್ಥಾಪನೆ ಮಾಡಿದ. ಆಡಳಿತದಲ್ಲಿ ಫರ್ಷಿಯನ್ ಭಾಷೆಯ ಬದಲು ಸಂಸ್ಕೃತ ಭಾಷೆ ಪ್ರಾತಿನಿಧ್ಯ ನೀಡಿದ.ಧಾರ್ಮಿಕ ಸುಧಾರಣೆ ಮಾಡಿದ. ಇಂದಿನ ಯುವಕರು‌‌ ಶಿವಾಜಿಯ ಧೈರ್ಯ ಸಾಹಸಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮರಾಠ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸುರೇಶ್ ರಾವ್ ಜಾದವ್, ಕಾರ್ಯದರ್ಶಿ ಗೋಪಾಲರಾವ್ ಜಾದವ್, ಜಿಜಾಮಾತ ಮಹಿಳಾ ಮಂಡಳಿ ಅಧ್ಯಕ್ಷೆ ಜಿ.ಉಷಾಬಾಯಿ, ಯುವ ಮುಖಂಡರಾದ ನಿತೀನ್ ಜಾಧವ್ , ರೋಹಿತ್ ಗಾಯಕವಾಡ್, ಕಿರಣ್ , ವಿನಯ್ ಜಾದವ್ ಸೇರಿದಂತೆ ಮರಾಠ ಸಮಾಜದ ಮುಖಂಡರು ಹಾಗೂ ಗಣ್ಯರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಸ್ವಾಗತಿಸಿದರು. ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ಕಾರ್ಯಕ್ರಮ ನಿರೂಪಿಸಿದರು. ಲೋಕೇಶ ಪಲ್ಲವಿ ಮತ್ತು ತಂಡದವರಿಂದ ಗೀತಗಾಯನ ಪ್ರಸ್ತುತಪಡಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಬುರಜನಹಟ್ಟಿಯ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಅಲಂಕೃತ ಟ್ಯಾಕ್ಟರ್‍ನಲ್ಲಿ ಛತ್ರಪತಿ ಶಿವಾಜಿ ಪುತ್ಥಳಿಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ಗಾಂಧಿ ಸರ್ಕಲ್, ಎಸ್.ಬಿ.ಐ ಸರ್ಕಲ್, ಪ್ರವಾಸಿ ಮಂದಿರ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ತ.ರಾ.ಸು ರಂಗಮಂದಿರ ತಲುಪಿತು. ಡೊಳ್ಳು ಕುಣಿತ, ತಮಟೆ ಹಾಗೂ ನಂದಿ ಧ್ವಜ ಕುಣಿತ
ಸೇರಿದಂತೆ ಇತರೆ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...