Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

396ನೇ ಶಿವಾಜಿ ಜಯಂತಿ : ಜನಪರ ಆಡಳಿತಗಾರ ಛತ್ರಪತಿ ಶಿವಾಜಿ : ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ

Facebook
Twitter
Telegram
WhatsApp

 

ಚಿತ್ರದುರ್ಗ (ಫೆ..19) : ಕೃಷ್ಣದೇವರಾಯನ ತರುವಾಯ ಭಾರತದಲ್ಲಿ ಬೃಹತ್ ಹಿಂದು ಸಾಮ್ರಾಜ್ಯ ಕಟ್ಟಿದ ನಾಯಕ ಛತ್ರಪತಿ ಶಿವಾಜಿ. ಜನರ ಮೇಲೆ ಹೆಚ್ಚಿನ ಹೊರೆಯಾಗದಂತೆ, ತೆರಿಗೆ ಪದ್ದತಿ ಅಳವಡಿಸಿಕೊಂಡು ಜನಪರ ಆಡಳಿತ ನೆಡಿಸಿದ ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ ಹಾಗೂ ಜಿಲ್ಲಾ ಮರಾಠ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ, ನಗರದ ತ.ರಾ.ಸು ರಂಗ ಮಂದಿರದಲ್ಲಿ ಭಾನುವಾರ ಆಯೋಜಿಸಲಾದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉತ್ತಮ ಸೈನ್ಯ ಸಂಘಟನೆ, ದೇಶಪ್ರೇಮಿ ಹಾಗೂ‌ ಆಡಳಿತಗಾರನಾಗಿ‌‌ ಶಿವಾಜಿ‌ ರೂಪುಗೊಳ್ಳಲು ತಾಯಿ ಜಿಜಾಬಾಯಿ ಕಾರಣ.‌ ಚಿಕ್ಕದಿನಿಂದಲೇ ಮಹಾಭಾರತ ಹಾಗೂ ರಾಮಯಣ ಕಥೆಗಳನ್ನು ಶಿವಾಜಿಗೆ ಹೇಳಿವುದರ ಮೂಲಕ ದೇಶದ ಸಂಸ್ಕೃತಿಯನ್ನು ಪರಿಚಯ ಮಾಡಿಸಿದಳು. ತಾಯಿ‌ ಜಿಜಾಬಾಯಿ ಒತ್ತಾಸೆಯಂತೆ ಶಿವಾಜಿ ಮರಾಠ ಸಾಮ್ರಾಜ್ಯ ಸ್ಥಾಪನೆ ಮಾಡಿದ. ಶಿವಾಜಿ ಅನುಸರಿಸದ ಗೆರಿಲ್ಲಾ ಯುದ್ಧ ತಂತ್ರ ಜೊತೆಗೆ ಶಕ್ತಿ ಮತ್ತು ಯುಕ್ತಿಯಿಂದಾಗಿ ಸಾಮ್ರಾಜ್ಯ ವಿಸ್ತರಣೆಯಾಯಿತು. ಗೆರಿಲ್ಲಾ ಮಾದರಿ ಯುದ್ದ ತಂತ್ರವನ್ನು ಇಂದಿಗೂ ವಿಶ್ವದ ನಾನಾಕಡೆ ಬಳಸುವುದನ್ನು ನಾವು ಕಾಣಬಹುದು ಎಂದರು.

ಐ.ಎನ್.ಒ ರಾಜ್ಯ ಮುಖ್ಯ ಸಂಚಾಲಕ ಬಿ.ಎಸ್. ಮಂಜುನಾಥಸ್ವಾಮಿ ವಿಶೇಷ ಉಪನ್ಯಾಸ ನೀಡಿ, ಮೊಘಲ್ ಹಾಗೂ ಆದಿಲ್‌ಷಾಯಿಗಳಿಗೆ‌ ತಲೆ ಬಾಗದೇ ಶಿವಾಜಿ ಹಿಂದೂ ಸಾಮ್ರಾಜ್ಯ ಸ್ಥಾಪನೆ ಮಾಡಿದ. ಆಡಳಿತದಲ್ಲಿ ಫರ್ಷಿಯನ್ ಭಾಷೆಯ ಬದಲು ಸಂಸ್ಕೃತ ಭಾಷೆ ಪ್ರಾತಿನಿಧ್ಯ ನೀಡಿದ.ಧಾರ್ಮಿಕ ಸುಧಾರಣೆ ಮಾಡಿದ. ಇಂದಿನ ಯುವಕರು‌‌ ಶಿವಾಜಿಯ ಧೈರ್ಯ ಸಾಹಸಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮರಾಠ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸುರೇಶ್ ರಾವ್ ಜಾದವ್, ಕಾರ್ಯದರ್ಶಿ ಗೋಪಾಲರಾವ್ ಜಾದವ್, ಜಿಜಾಮಾತ ಮಹಿಳಾ ಮಂಡಳಿ ಅಧ್ಯಕ್ಷೆ ಜಿ.ಉಷಾಬಾಯಿ, ಯುವ ಮುಖಂಡರಾದ ನಿತೀನ್ ಜಾಧವ್ , ರೋಹಿತ್ ಗಾಯಕವಾಡ್, ಕಿರಣ್ , ವಿನಯ್ ಜಾದವ್ ಸೇರಿದಂತೆ ಮರಾಠ ಸಮಾಜದ ಮುಖಂಡರು ಹಾಗೂ ಗಣ್ಯರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಸ್ವಾಗತಿಸಿದರು. ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ಕಾರ್ಯಕ್ರಮ ನಿರೂಪಿಸಿದರು. ಲೋಕೇಶ ಪಲ್ಲವಿ ಮತ್ತು ತಂಡದವರಿಂದ ಗೀತಗಾಯನ ಪ್ರಸ್ತುತಪಡಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಬುರಜನಹಟ್ಟಿಯ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಅಲಂಕೃತ ಟ್ಯಾಕ್ಟರ್‍ನಲ್ಲಿ ಛತ್ರಪತಿ ಶಿವಾಜಿ ಪುತ್ಥಳಿಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ಗಾಂಧಿ ಸರ್ಕಲ್, ಎಸ್.ಬಿ.ಐ ಸರ್ಕಲ್, ಪ್ರವಾಸಿ ಮಂದಿರ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ತ.ರಾ.ಸು ರಂಗಮಂದಿರ ತಲುಪಿತು. ಡೊಳ್ಳು ಕುಣಿತ, ತಮಟೆ ಹಾಗೂ ನಂದಿ ಧ್ವಜ ಕುಣಿತ
ಸೇರಿದಂತೆ ಇತರೆ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!