ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ದಾವಣಗೆರೆ: ಚಾಲಾಕಿ ಖದೀಮರು SBI ಬ್ಯಾಂಕ್ ಗೆ ಕನ್ನ ಹಾಕಿ 4 ಕೋಟಿ ರೂಪಾಯಿಗೂ ಅಧಿಕ ಚಿನ್ನಾಭರಣ ಕದ್ದೊಯ್ದಿರುವ ಘಟನೆ ದಾವಣಗೆರೆ ಜಿಕ್ಲೆಯ ನ್ಯಾಮತಿಯಲ್ಲಿ ನಡೆದಿದೆ. ಕಳ್ಳರ ಕೈಚಳಕ ನೋಡೊ, ಅವರ ಬುದ್ದಿವಂತಿಕೆ ನೋಡಿ ಪೊಲೀಸರೇ ಶಾಕ್ ಆಗಿದ್ದಾರೆ. ಬರೋಬ್ಬರಿ 4 ಕೋಟಿ ಚಿನ್ನಾಭರಣ ಹೊತ್ತೊಯ್ದವರು ಯಾವುದೇ ಸಣ್ಣ ಸುಳಿವನ್ನು ನೀಡಿಲ್ಲ. ಇದು ಪೊಲೀಸರಿಗೂ ತಲೆನೋವಾಗಿದೆ.
ಬ್ಯಾಂಕ್ ನ ಕಿಟಕಿ ಮುರಿದಿರುವ ಖದೀಮರು ಬೆಳ್ಳಂಬೆಳಗ್ಗೆಯೇ ಈ ಕೆಲಸ ಮಾಡಿದ್ದಾರೆ. ಅಪಾರ ಪ್ರಮಾಣದ ಹಣ, ಚಿನ್ನಾಭರಣವನ್ನು ಕದ್ದೊಯ್ದಿದ್ದಾರೆ. ಘಟನೆಯ ಬಗ್ಗೆ ತಿಳಿದ ಕೂಡಲೇ ನ್ಯಾಮತಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಳ್ಳರು ಕದ್ದಿರುವ ಹಣವೆಷ್ಟು, ಚಿನ್ನಾಭಣ ಎಲ್ಲದರ ಬಗ್ಗೆಯೂ ಮಾಹಿತಿ ಕಲೆ ಹಾಕಿದ್ದಾರೆ. ಮಹಾ ಬುದ್ದಿವಂತಿಕೆಯನ್ನು ಪ್ರದರ್ಶನ ಮಾಡಿರುವ ಖತರ್ನಾಕ್ ಕಳ್ಳರು, ಪೊಲೀಸ್ ಶ್ವಾನಕ್ಕೆ ಅನುಮಾನವೇ ಬರದಂತೆ ಮಾಡಿದ್ದಾರೆ.
ಎಲ್ಲೇ ಕಳ್ಳತನ ನಡೆದರು, ಕಳ್ಳರನ್ನು ಹಿಡಿಯಲು ಏನು ಸುಳಿವು ಸಿಗದೆ ಹೋದಲ್ಲಿ ಪೊಲೀಸ್ ಶ್ವಾನಗಳು ಕಳ್ಳನ ಸುಳಿವನ್ನು ಹುಡುಕುತ್ತವೆ. ಕಳ್ಳರ ಓಡಾಟ, ಬೆವರು ವಾಸನೆ ಏನಾದರೊಂದರ ಜಾಡು ಹಿಡಿದು ಕಳ್ಳರನ್ನು ಹಿಡಿದು ಬಿಡುತ್ತದೆ. ಆದರೆ ಈ ಐನಾತಿ ದರೋಡೆಕೋರರು. ಈಗ ಪೊಲೀಸರ ಶ್ವಾನಗಳಿಗೂ ಯಾವುದೇ ಸುಳಿವು ಸಿಗದಂತೆ ಮಾಡಿದ್ದಾರೆ. ತಾವೂ ಓಡಾಡಿದ ಕಡೆಯಲ್ಲೆಲ್ಲಾ ಖಾರದ ಪುಡಿ ಎರಚಿದ್ದಾರೆ. ಶ್ವಾನ ದಳದ ದಾರಿ ತಪ್ಪಿಸಲು ಇಡೀ ಬ್ಯಾಂಕ್ ನಲ್ಲಿ ಖಾರದ ಪುಡಿ ಎರಚಿದ್ದಾರೆ. ಸಿಸಿಟಿವಿಯ ಡಿವಿಆರ್ ಅನ್ನು ಕದ್ದೊಯ್ದಿದ್ದಾರೆ. ಬ್ಯಾಂಕ್ ಸಿಸಿಟಿವಿ ಇಲ್ಲದೆ ಹೋದರೆ ಏನಾಯ್ತು ಪೊಲೀಸರು ಇಡೀ ನಗರದ ಸಿಸಿಟಿವಿಯನ್ನು ಪರಿಶೀಲನೆ ಮಾಡುತ್ತಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್