Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿಎಂ ಆವಾಸ್ ಯೋಜನೆಯಡಿ 4 ಕೋಟಿಗೂ ಅಧಿಕ ಮನೆಗಳ ನಿರ್ಮಾಣ: ಪ್ರಹ್ಲಾದ್ ಜೋಶಿ

Facebook
Twitter
Telegram
WhatsApp

ಸುದ್ದಿಒನ್, ದಾವಣಗೆರೆ. ಡಿ.29:  ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಳೆದ 10 ವರ್ಷಗಳಲ್ಲಿ ದೇಶದ ಬಡವರಿಗಾಗಿ  4 ಕೋಟಿಗೂ ಅಧಿಕ ಮನೆಗಳನ್ನು ನಿರ್ಮಾಣ ಮಾಡಿಕೊಡಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.

ದಾವಣಗೆರೆ ತಾಲ್ಲೂಕಿನ ಹೆಮ್ಮನಬೇತೂರು ಗ್ರಾಮದಲ್ಲಿ ಶುಕ್ರವಾರ  ಆಯೋಜಿಸಲಾಗಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಹಿಂದೆ 3.50 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಆದರೆ ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರ 4 ಕೋಟಿಗೂ ಅಧಿಕ  ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಿದೆ. ಈ ಮೂಲಕ ಜನಪರ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ ಎಂದರು.

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಬಡ ಕುಟುಂಬಗಳಿಗೆ ಉಚಿತ ಎಲ್.ಪಿ.ಜಿ ಸಂಪರ್ಕ ಕಲ್ಪಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದ ಅವರು, ಭವಿಷ್ಯದಲ್ಲಿ ದೇಶದ ಕೃಷಿ ಕ್ಷೇತ್ರ ಸಂಪೂರ್ಣ ತಾಂತ್ರಿಕತೆಯಗಳ ಮೇಲೆ ನಡೆಯಲಿದೆ. ಇದರ ಭಾಗವಾಗಿ ಬೆಳೆಗಳಿಗೆ ಔಷಧಿ ಸಿಂಪರಣೆಗೆ 15 ಸಾವಿರ ಡ್ರೋಣ್ ಗಳನ್ನು ದೇಶದ ಸ್ತ್ರೀ ಶಕ್ತಿ ಸಂಘಗಳಿಗೆ ಶೇ.80 ರಷ್ಟು ಸಹಾಯಧನದೊಂದಿಗೆ ನೀಡಲಿದೆ. ಈ ಯೋಜನೆಗೆ ನಮೋ ಡ್ರೋಣ್ ದೀದಿ ಎಂದು ಹೆಸರಿಸಲಾಗಿದೆ. ಈ ಡ್ರೋಣ್ ಸಹಾಯದಿಂದ ನ್ಯಾನೋ ಯೂರಿಯಾವನ್ನು ದಿನಕ್ಕೆ 100 ಎಕರೆ ಸಿಂಪರಣೆ ಮಾಡಬಹುದಾಗಿದೆ. ಈ ಯೋಜನೆ ದೇಶದಲ್ಲಿ ಬಹುದೊಡ್ಡ ಬದಲಾವಣೆ ತರಲಿದೆ ಎಂದರು.

ದಾವಣಗೆರೆ ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ ಮಾತನಾಡಿ, ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೈ ಗೊಂಡಿರುವ ಜನಕಲ್ಯಾಣ ಕಾರ್ಯಕ್ರಮಗಳಿಂದ ದೇಶದ ಅಭಿವೃದ್ಧಿಯ ಚಿತ್ರಣ ಬದಲಾಗಿದೆ ಎಂದರು. ಉಜ್ವಲ  2.0 ಯೋಜನೆ ಅಡಿಯಲ್ಲಿ ರಾಜ್ಯದಲ್ಲಿ ಮತ್ತೆ  ನಾಲ್ಕು ಲಕ್ಷ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಿಲಿಂಡರ್ ವಿತರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಹರಿಹರ ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಎಸ್.ವಿ.ರಾಮಚಂದ್ರ, ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿ ಸ್ವಾಮಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಾಶ್ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳಿಗೆ  ವಿವಿಧ ಸೌಲಭ್ಯಗಳನ್ನು ಸಚಿವರು ವಿತರಿಸಿದರು. ಸಂಕಲ್ಪಯಾತ್ರೆ ಅಂಗವಾಗಿ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣೆ ಆಯೋಜಿಸಲಾಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

error: Content is protected !!