Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಚಿತ ಸೀರೆ ಕೊಡುತ್ತಾರೆಂದು ಹೋಗಿದ್ದ 4 ಮಹಿಳೆಯರು ಸಾವು : ಇನ್ನು ಹಲವರ ಸ್ಥಿತಿ ಗಂಭೀರ..!

Facebook
Twitter
Telegram
WhatsApp

ತಮಿಳುನಾಡು: ಚುನಾವಣೆ ಸಮಯದಲ್ಲಿ ಜನರನ್ನು‌ ಮರಳು ಮಾಡಲು ಈ ರಾಜಕಾರಣಿಗಳು ಉಚಿತ ಸೀರೆ, ಉಚಿತ ಕುಕ್ಕರ್ ಅಂತ ಉಚಿತವಾದ ಗಿಫ್ಟ್ ಗಳನ್ನು ನೀಡುತ್ತಾರೆ. ಆದರೆ ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ವನ್ನಿಯಂಬಾಳಿಯಲ್ಲಿ ಉಚಿತ ಸೀರೆ ಹಂಚಿಕೆ ಮಾಡಿದ್ಎಉ, ಇದು ನಾಲ್ಕು ಮಹಿಳೆಯರ ಸಾವಿಗೆ ಕಾರಣವಾಗಿದೆ.

ವನ್ನಿಯಂಬಾಳಿಯಲ್ಲಿ ಥೈಪೋಸಂ ಹಬ್ಬ ನಡೆಯುತ್ತಿದೆ. ಈ ಹಬ್ಬದ ಹಿನ್ನೆಲೆ ಅಯ್ಯಪ್ಪನ್ ಎಂಬುವವರು ಮಹಿಳೆಯರಿಗೆ ಉಚಿತ ಸೀರೆ ಹಂಚಿಕೆ ಮಾಡಿದ್ದಾರೆ. ಸೀರೆ ಪಡೆಯುವವರಿಗೆ ಟೋಕನ್ ವ್ಯವಸ್ಥೆ ಕೂಡ ಮಾಡಲಾಗಿತ್ತು. ಈ ಟೋಕನ್ ನೀಡಿದರೆ ಸೀರೆ ನೀಡಲಾಗುತ್ತಾ ಇತ್ತು. ಆದರೆ ಈ ವಿಚಾರ ಸುತ್ತ ಮುತ್ತ ಬೇಗ ಹರಡಿದೆ.

ಹೀಗಾಗಿ ಮಹಿಳೆಯರೆಲ್ಲ ಉಚಿತ ಸೀರೆ ಪಡೆಯಲು ಮುಗಿಬಿದ್ದಿದ್ದಾರೆ. ಟೋಕನ್ ಪಡೆಯುವುದಕ್ಕೇನೆ ನೂಕು ನುಗ್ಗಲಾಗಿದೆ. ಈ ಪರಿಣಾಮ ನಾಲ್ಕು ಜನ ವೃದ್ದೆಯರು ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಇನ್ನು ಹನ್ನೊಂದು ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ.ಬ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!