Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ 40 ಕೆಜಿ ಚಿನ್ನ ಚಿಕ್ಕಮಗಳೂರಿನಲ್ಲಿ ಪೊಲೀಸರ ವಶಕ್ಕೆ..!

Facebook
Twitter
Telegram
WhatsApp

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಜನ ನಾಯಕರು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.‌ ನಾಳೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ. ಹೀಗಾಗಿ ಆದಷ್ಟು ಇಂದೇ ಎಲ್ಲರೂ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಇದರ ನಡುವೆ ಚುನಾವಣೆ ಅನೌನ್ಸ್ ಆಗುತ್ತಿದ್ದಂತೆ. ಪೊಲೀಸರು ಅಲರ್ಟ್ ಆಗಿದ್ದಾರೆ.

ಯಾಕಂದ್ರೆ ಎಲೆಕ್ಷನ್ ನಲ್ಲಿ ಹಣದ ಹೊಳೆ ಹರಿಯುತ್ತದೆ. ಅದನ್ನು ತಪ್ಪಿಸಲು, ದಾಖಲೆಯಿಲ್ಲದ ಹಣ ಸಾಗಾಟವನ್ನು ತಪ್ಪಿಸುವುದು ಸೇರಿದಂತೆ ಎಲ್ಲಾ ರೀತಿಯ ತಪಾಸಣೆ ನಡೆಯಲಿದೆ. ಹೀಗಾಗಿಯೇ ಪೊಲೀಸರು ಎಲ್ಲಾ ಕಡೆ ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಿ ತಪಾಸಣೆ ಮಾಡುತ್ತಿದ್ದಾರೆ. ಹೀಗೆ ತಪಾಸಣೆ ಮಾಡುವಾಗ ಚಿಕ್ಕಮಗಳೂರಿನಲ್ಲಿ ಚಿನ್ನದ ಸಾಮ್ರಾಜ್ಯವೇ ತಗಲಾಕಿಕೊಂಡಿದ್ದು.

ತರೀಕೆರಿ ತಾಲೂಕಿನ ಎಂಸಿ ಹಳ್ಳಿಯ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಮಾಡುವಾಗ ಈ ಚಿನ್ನಾಭರಣ ಸಿಕ್ಕಿದೆ. ಕಂಟೈನರ್ ನಲ್ಲಿ ಬರೋಬ್ಬರಿ 40 ಕೆಜಿ ಚಿನ್ನಾಭರಣವನ್ನು ಸಾಗಿಸಲಾಗಿತ್ತು. ಅದು 23 ಕೋಟಿ ಬೆಲೆ ಬಾಳುವ ಚಿನ್ನಾಭರಣ. ಇನ್ನು ಅಷ್ಟೊ ದೊಡ್ಡ ಮೊತ್ತದ ಚಿನ್ನಾಭರಣಕ್ಕೆ ದಾಖಲೆಗಳು ಸಿಕ್ಕಿಲ್ಲ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಅದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!