Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

42 ಕೋಟಿಗೂ ದಾಖಲೆ ಕೊಟ್ಟು ಬಿಡಿಸಿಕೊಳ್ಳುತ್ತೇವೆ : ಅಂಬಿಕಾಪತಿ ಪುತ್ರ ಹೇಳಿಕೆ

Facebook
Twitter
Telegram
WhatsApp

ಬೆಂಗಳೂರು: ಐಟಿ ಅಧಿಕಾರಿಗಳ ದಾಳಿಯಿಂದ ನಿನ್ನೆ ಕಾರ್ಪೋರೇಟರ್ ಅಂಬಿಕಾಪತಿ ಮನೆಯಲ್ಲಿ 42 ಕೋಟಿ ಹಣ ಜಪ್ತಿ ಮಾಡಲಾಗಿದೆ. ಇಂದು ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಮನೆಯಲ್ಲಿ ಪರಿಶೀಲನೆ ನಡೆಸಿ, ಅಂತಿಮ ನಿಯಮಗಳನ್ನು ಪಾಲನೆ ಮಾಡಲಾಗಿದೆ. ಜೊತೆಗೆ ಮಂಗಳವಾರ ಹಾಜರಾಗುವಂತೆ ಪ್ರಮೋದ್ ಹಾಗೂ ಪ್ರದೀಪ್ ಗೂ ನೋಟೀಸ್ ನೀಡಲಾಗಿದೆ.

ಬಳಿಕ ಮಾತನಾಡಿರುವ ಅಂಬಿಕಾಪತಿ ಪುತ್ರ ಪ್ರದೀಪ್, ಕಳೆದ 15 ವರ್ಷದಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದೇವೆ. ಜೊತೆಗೆ ಬ್ಯುಸಿನೆಸ್ ಕೂಡ ಮಾಡುತ್ತಿದ್ದೇವೆ. ಅದು ಯಾವುದೇ ಹವಾಲ ಹಣ ಅಲ್ಲ, ನಮ‌್ಮ ಬ್ಯುಸಿನೆಸ್ ಗೆ ಸಂಬಂಧಿಸಿದ್ದು, ಎಲ್ಲಾ ದಾಖಲೆಗಳನ್ನು ನೀಡಿಯೇ ಹಣ ಬಿಡಿಸಿಕೊಳ್ಳುತ್ತೇವೆ. ಐಟಿ ವಿಚಾರಣೆಗೆ ಹಾಜರಾಗಿ ಎಲ್ಲಾ ದಾಖಲೆಗಳನ್ನು ನೀಡುತ್ತೇವೆ ಎಂದಿದ್ದಾರೆ.

ನಿನ್ನೆ ಐಟಿ ಅಧಿಕಾರಿಗಳ ದಾಳಿಯಿಂದಾಗಿ ಅಶ್ವತ್ಥಮ್ಮ ಹಾಗೂ ಅಂಬಿಕಾಪತಿಗೆ ಸಂಬಂಧಿಸಿದ 42 ಕೋಟಿ ಹಣ ಸಿಕ್ಕಿತ್ತು. ಐಟಿ ಅಧಿಕಾರಿಗಳು ರಾತ್ರಿಯೆಲ್ಲಾ ಅವರ ಮನೆಯಲ್ಲಿಯೇ ಉಳಿದು, ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಿದ್ದಾರೆ. ಅದಷ್ಟೇ ಅಲ್ಲ ಎರಡು ಸೂಟ್ ಕೇಸ್ ಗಳನ್ನು ಕೂಡ ಪಡೆದಿದ್ದಾರೆ. ಅದರಲ್ಲಿ ಆಸ್ತಿ ಪತ್ರಗಳು ಇದೆ ಎನ್ನಲಾಗಿದ್ದು, ಪರಿಶೀಲನೆ ನಡೆಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!