Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

16 ಬೇಡಿಕೆಗಳ ಈಡೇರಿಕೆಗಾಗಿ ಜನವರಿ 06 ರಂದು 42 ದಿನಗಳ ಪಾದಯಾತ್ರೆ : ಡಾ.ಪ್ರಣವಾನಂದಸ್ವಾಮಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಸೆಪ್ಟೆಂಬರ್. 26 : ಬ್ರಹ್ಮಶ್ರಿ ನಾರಾಯಣ ಗುರೂಜಿ ನಿಗಮಕ್ಕೆ ಐದು ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವುದು ಸೇರಿದಂತೆ ಹದಿನಾರು ಬೇಡಿಕೆಗಳ ಈಡೇರಿಕೆಗಾಗಿ ಜ.6 ರಂದು ಕಲ್ಬುರ್ಗಿ ಜಿಲ್ಲೆಯ ಶಕ್ತಿ ಪೀಠದಿಂದ ಬೆಂಗಳೂರುವರೆಗೆ ಪಾದಯಾತ್ರೆ ನಡೆಸಲಾಗುವುದೆಂದು ಡಾ.ಪ್ರಣವಾನಂದಸ್ವಾಮಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಗಣತಿಯಲ್ಲಿ ಈಡಿಗ ಎಂದು ಬರೆಸಬೇಕು. 26 ಪಂಗಡಗಳಿವೆ. ಶಿವಮೊಗ್ಗದಲ್ಲಿ ದೀವರು ಎಂದು ಬರೆಸುತ್ತಾರೆ, ಮಂಗಳೂರು ಉಡುಪಿಯಲ್ಲಿ ಬಿಲ್ಲವ, ಹಾವೇರಿಯಲ್ಲಿ ಈಳಿಗರು ಎಂದು ತಲ ತಲಾಂತರಗಳಿಂದ ಬರೆಸುತ್ತಿದ್ದಾರೆ. ಕಾಲಂ-10 ರಲ್ಲಿ ಈಡಿಗ, ಕಾಲಂ 9 ರಲ್ಲಿ ಅವರವರ ಜಾತಿ ಬರೆಸಿಕೊಳ್ಳಲಿ ಎಂದು ಸ್ವಾಮೀಜಿ ಮನವಿ ಮಾಡಿದರು.

ಹಿಂದುಳಿದ ವರ್ಗದವರಿಗೆ ಯಾವುದಾದರೂ ಸೌಲಭ್ಯ ಕೊಡಲಿ, ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಿ ನಮ್ಮದೇನು ಅಭ್ಯಂತರವಿಲ್ಲ. ಸೇಂದಿ ಸಾರಾಯಿ ಮಾರಾಟ ಮಾಡಿಕೊಂಡು ಬದುಕಿದ ಸಮಾಜ ನಮ್ಮದು. ಬೆಂಗಳೂರಿನ ವಿಧಾನಸೌಧದ ಮುಂಭಾಗ ನಾರಾಯಣ ಗುರೂಜಿಗಳ ಪುತ್ಥಳಿ ನಿರ್ಮಾಣವಾಗಬೇಕು. ಸೇಂದಿ ಮಾರಾಟ ಬಂದ್ ಮಾಡಿರುವುದರ ಹಿಂದೆ ರಾಜಕೀಯ ಹುನ್ನಾರವಿದೆ. ಗೋಮಾಳ ಜಮೀನುಗಳನ್ನು ನಮ್ಮ ವಶಕ್ಕೆ ಕೊಡಿ. ಎಂದು ಸರ್ಕಾರವನ್ನು ಒತ್ತಾಯಿಸುವುದಕ್ಕಾಗಿ 42 ದಿನಗಳ ಪಾದಯಾತ್ರೆ ಹಮ್ಮಿಕೊಂಡಿದ್ದೇವೆ. ಹಿರಿಯೂರು ತಾಲ್ಲೂಕಿನ ಪಿಲಾಜನಹಳ್ಳಿಯಲ್ಲಿ ಸೆ.27 ರಂದು ಬೆಳಿಗ್ಗೆ 10-30 ರಿಂದ ಸಂಜೆ ಐದು ಗಂಟೆಯತನಕ ಚಿಂತನ ಚರ್ಚೆ ನಡೆಯಲಿದೆ. ಬಿ.ಕೆ.ಹರಿಪ್ರಸಾದ್ ಸೇರಿದಂತೆ ಈಡಿಗ ಸಮಾಜದ ಅನೇಕ ಮುಖಂಡರುಳು ಭಾಗವಹಿಸಲಿದ್ದಾರೆಂದು ಹೇಳಿದರು.

ಬಿಜೆಪಿ.ಯಲ್ಲಿ ನಮ್ಮ ಸಮಾಜದ ಇಬ್ಬರಿಗೆ ಮಂತ್ರಿ ಸ್ಥಾನ ನೀಡಲಾಗಿತ್ತು. ಈಗಿನ ಕಾಂಗ್ರೆಸ್ ಸರ್ಕಾರದಲ್ಲಿ ಒಬ್ಬರೆ ಮಂತ್ರಿಯಿದ್ದಾರೆ. ಆರು ಶಾಸಕರುಗಳು ಪಕ್ಷದಲ್ಲಿದ್ದಾರೆ. ಈಡಿಗರನ್ನು ಮುಗಿಸುವ ಕೆಲಸವಾಗುತ್ತಿದೆ. ಕೂಡಲ ಸಂಗಮ ಶ್ರೀಗಳನ್ನು ಉಚ್ಚಾಟಿಸಿರುವುದು ಸರಿಯಲ್ಲ. ಮತ್ತೆ ಸ್ವಾಮೀಜಿಗಳನ್ನು ಪೀಠದಲ್ಲಿ ಕೂರಿಸಬೇಕು. ಸರ್ಕಾರವೆ ಈಚಲು ಮರ ಬೆಳೆಸಿ ಕುಲಕಸುಬು ಸೇಂದಿ ಮಾರುವುದನ್ನು ಕಳೆದುಕೊಂಡಿರುವ ನಮ್ಮ ಜನಾಂಗಕ್ಕೆ ತಲಾ ಎರಡು ಎಕರೆ ಜಮೀನು ಕೊಡಬೇಕೆಂದು ಡಾ.ಪ್ರಣವಾನಂದ ಸ್ವಾಮೀಜಿ ಸರ್ಕಾರವನ್ನು ಒತ್ತಾಯಿಸಿದರು.

ರಾಷ್ಟ್ರೀಯ ಈಡಿಗ ಮಹಾ ಮಂಡಳಿ ರಾಜ್ಯಾಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರವೀಣ್‍ಕುಮಾರ್, ಮೋಹನ್‍ಕುಮಾರ್, ರಮೇಶ್‍ಕುಮಾರ್, ಲೋಕೇಶ್, ಜಯಕುಮಾರ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...