ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಹುಟ್ಟಿಸುತ್ತಿದೆ. ಎರಡು ಬಾರಿ ಬಂದ ಕೊರೊನಾ ಕೊಟ್ಟ ಹೊಡೆತ ಅಷ್ಟಿಷ್ಟಲ್ಲ. ಈಗಲೂ ಚೇತರಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ. ಹೀಗಿರುವಾಗ ಮತ್ತೆ ಕೊರೊನಾ ಛಾಯೆ ರಾಜ್ಯದ ಮೇಲೆ ಬಿದ್ದರೆ ಜನರ ಮನಸ್ಥಿತಿ ಎಷ್ಟು ಆತಂಕಗೊಳ್ಳುತ್ತದೆ. ಈಗಾಗಲೇ ರಾಜ್ಯದಲ್ಲೂ ಕೊರೊನಾ ತನ್ನ ಆಟ ಶುರು ಮಾಡಿದೆ. ಪಾಸಿಟಿವ್ ಕೇಸ್ ಗಳು ಕಾಣಿಸಿಕೊಳ್ಳುತ್ತಿವೆ. ನಿನ್ನೆ ಒಂದೇ ದಿನ ಅಂದರೆ ಕಳೆದ 24 ಗಂಟೆಗಳಲ್ಲಿ 44 ಪಾಸಿಟಿವ್ ಕೇಸ್ ಗಳು ದಾಖಲಾಗಿವೆ. ಈ ಮೂಲಕ ಒಟ್ಟು 79 ಪಾಸಿಟಿವ್ ಕೇಸ್ ಗಳು ಸಕ್ರೀಯವಾಗಿವೆ.
487 ಆರ್ಟಿಪಿಸಿಆರ್ ಹಾಗೂ 235 ಱಪಿಡ್ ಟೆಸ್ಟ್ಗಳನ್ನ ಮಾಡಲಾಗಿದೆ. ಇನ್ನು, 79 ಸಕ್ರಿಯ ಪ್ರಕರಣಗಳಲ್ಲಿ 62 ಕೇಸ್ಗಳು ಹೋಮ್ಐಸೋಲೇಷನ್ನಲ್ಲಿ ಇರಲು ಸೂಚನೆ ನೀಡಲಾಗಿದೆ. 17 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 6 ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ.
ಕೇಸ್ ಗಳು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಕಾರಣ, ಆರೋಗ್ಯ ಸಚುವ ದಿನೇಶ್ ಗುಂಡೂರಾವ್ ಎಚ್ವರಿಕೆಯನ್ನು ನೊಇಡಿದ್ದಾರೆ. ಜನರು ಕೂಡ ಮುಂಜಾಗ್ರತ ಕ್ರಮಗಳನ್ನು ಪಾಲನೆ ಮಾಡಲು ಸೂಚಿಸಿದ್ದಾರೆ. ಅದರಲ್ಲೂ ವಯಸ್ಸಾದವರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಹೇಳಿದ್ದಾರೆ. ಕೊರೊನಾ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ, ತಪಾಸಣೆಗೆ ಒಳಗಾಗಬೇಕು ಎಂದಿದ್ದಾರೆ. ವಾತಾವರಣ ಕೂಡ ತಂಪಾಗಿದ್ದು, ಪ್ರತಿ ವರ್ಷ ಈ ತಿಂಗಳಲ್ಲಿ ಜ್ವರ, ನೆಗಡಿ ಕಾಮನ್ ಆಗಿರುತ್ತದೆ. ಆದರೂ ಜನ ಸಾಮಾನ್ಯರು ಎಚ್ಚರದಿಂದ ಇರಬೇಕು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್