Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

5 ರಾಜ್ಯದ ಚುನಾವಣೆ : ಬಿವೈ ವಿಜಯೇಂದ್ರ ಹೇಳಿದ್ದೇನು..?

---Advertisement---

ನವದೆಹಲಿ: ಇಂದು ಪಂಚರಾಜ್ಯ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಫಲಿತಾಂಶ ಮುಂಬರುವ ಕರ್ನಾಟಕ ಲೋಕಸಭಾ ಚುನಾವಣೆಯ ಮೇಲೂ ಪ್ರಭಾವ ಬೀರಲಿದೆ. ಈ ಸಂಬಂಧ ಬಿವೈ ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯ ವಿಜಯಯಾತ್ರೆ ಇಲ್ಲಿಗೆ ನಿಲ್ಲುವುದಿಲ್ಲ ಎಂದಿದ್ದಾರೆ.

ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್ಗಢ ವಿಧಾನಸಭಾ ಫಲಿತಾಂಶ ರಾಜ್ಯ ರಾಜಕೀಯದ ಮೇಲೂ ಪ್ರಭಾವ ಬೀರಲಿದೆ. ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ವಿಜಯಯಾತ್ರೆ ಮುಂದುವರೆಯಲಿದೆ. ದೇಶದಲ್ಲಿ ಬದಲಾವಣೆಯ ಯಾತ್ರೆ ಮುಂದುವರೆಯುತ್ತಿದೆ ಎಂದು ವಿಪಕ್ಷಗಳ ಬೊಬ್ಬೆ ಹೊಡೆಯುತ್ತಿದ್ದವು. ದೇಶದಲ್ಲಿನ ವಾತಾವರಣ ಬಿಜೆಪಿಯ ಪರವಾಗಿಯೇ ಇದೆ. ಮೋದಿ ಪರವಾಗಿಯೇ ಇದ್ದೇವೆ ಎಂದು ಜನ ಉತ್ತರ ಕೊಟ್ಟಿದ್ದಾರೆ ಎಂದಿದ್ದಾರೆ.

ಐದು ರಾಜ್ಯಗಳ ಚುನಾವಣೆ ಸೆಮಿಪೈನಲ್ ಎಂಬಂತೆ ವ್ಯಾಖ್ಯಾನವಿತ್ತು. ಅಲೆಯಲ್ಲ, ಸುನಾಮಿ ರೀತಿಯಲ್ಲಿ ಬಿಜೆಪಿ ಪರವಾಗಿ ಜನರ ಬೆಂಬಲವಿದೆ. ತೆಲಂಗಾಣದಲ್ಲಿ ಬಿಜೆಪಿ ಫಲಿತಾಂಶಕ್ಕೆ ಬಹಳಷ್ಟು ನಿರೀಕ್ಷೆ ಇರಲಿಲ್ಲ. ಆದರೆ ಕರ್ನಾಟಕದಲ್ಲಿನ ಫಲಿತಾಂಶದಿಂದ ನಮಗೆ ಹಿನ್ನಡೆಯಾಗಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ, ತೆಲಂಗಾಣದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ. ಗ್ಯಾರಂಟಿ ಎಲ್ಲಾ ಕಡೆ ವರ್ಕ್ ಆಗಿಲ್ಲ. ಕರ್ನಾಟಕದಲ್ಲಿ ಮತದಾರರ ಕಣ್ಣಿಗೆ ಮಂಕುಬೂದಿ ಎರಚಿದಂತೆ ತೆಲಂಗಾಣದಲ್ಲೂ ಬೂದಿ ಎರಚಿ ಗೆದ್ದಿದ್ದಾರೆ. ಬಿಆರ್‌ಎಸ್ ಆಡಳಿತ ವಿರೋಧಿ ಅಲೆಯನ್ನು ನಮ್ಮ ಪಕ್ಷ ಬಳಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment