Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸ ವರ್ಷಕ್ಜೆ ಸರ್ಕಾರಕ್ಕೆ ಕಲೆಕ್ಟ್ ಆಗಿದ್ದು 50..100 ಕೋಟಿಯಲ್ಲ : ಕೇಳಿದ್ರೆ ಶಾಕ್ ಆಗ್ತೀರ..!

Facebook
Twitter
Telegram
WhatsApp

2023 ಕಳೆದು 2024ಕ್ಕೆ ಎಲ್ಲರೂ ಕಾಲಿಟ್ಟಿದ್ದಾರೆ. ಈ ಹೊಸ ವರ್ಷದ ಸಂಭ್ರಮವನ್ನು ಎಲ್ಲೆಡೆ ಭರ್ಜರಿಯಿಂದ ಸ್ವಾಗತ ಮಾಡಲಾಗಿದೆ. ಮನೆಯಲ್ಲಿ ಪಾರ್ಟಿ ಮಾಡುವವರು, ಪಬ್, ರೆಸ್ಟೋಬಾರ್ ಗಳಲ್ಲಿ ಪಾರ್ಟಿ ಮಾಡುವ ಮೂಲಕ ಈ ವರ್ಷವನ್ಬು ಬರಮಾಡಿಕೊಂಡಿದ್ದಾರೆ. ಹೊಸ ವರ್ಷ ಅಂದ ಕೂಡಲೇ ಮದ್ಯಪಾನ ಹೆಚ್ಚಾಗಿನೇ ಖರ್ಚಾಗುತ್ತದೆ. ಈ ಮೂಲಕ ಈ ವರ್ಷ ಸರ್ಕಾರಕ್ಕೆ ಕಲೆಕ್ಟ್ ಆಗಿರುವುದು ಎಷ್ಟು ಕೋಟಿ ಗೊತ್ತಾ..?

ಡಿಸೆಂಬರ್ 23ರಿಂದ ಡಿಸೆಂಬರ್ 31ರವರೆಗೆ 1072 ಕೋಟಿ ರೂಪಾಯಿ ಆದಾಯ ರಾಜ್ಯ ಸರ್ಕಾರಕ್ಕೆ ಬಂದಿದೆ. ಡಿಸೆಂಬರ್ 23ರಿಂದ ಡಿಸೆಂಬರ್ 31ರವರೆಗೂ IML ಲಿಕ್ಕರ್‌ನಲ್ಲಿ ಒಟ್ಟು 22.2 ಲಕ್ಷದ ಬಾಕ್ಸ್ ಮಾರಾಟವಾಗಿದೆ. 22.2 ಲಕ್ಷ ಬಾಕ್ಸ್ ಸೆಲ್ ಆಗಿರುವುದರಿಂದ ಒಟ್ಟು 900 ಕೋಟಿ ರೂಪಾಯಿ ಆದಾಯ‌ ಬಂದಿದೆ. ನ್ಯೂ ಇಯರ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಯರ್ 14.೦7 ಲಕ್ಷ ಬಾಕ್ಸ್ ಸೇಲ್ ಮಾಡಲಾಗಿದೆ. ಬಿಯರ್ ಮಾರಾಟದಿಂದಲೇ ಸುಮಾರು 170 ಕೋಟಿರೂಪಾಯಿ ಆದಾಯ ಸರ್ಕಾರದ ಬೊಕ್ಕಸ ಸೇರಿದೆ.

ನಿನ್ನೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೊಸ ವರ್ಷಕ್ಕೆ ರಸ್ತೆಗಳೆಲ್ಲಾ ಅಲಂಕಾರಗೊಂಡಿದ್ದವು. ಜಗಮಗಿಸುವ ಕಲರ್ ಫುಲ್ ಬೆಳಕಿನೊಂದಿಗೆ ರಾರಾಜಿಸುತ್ತಿತ್ತು. ಯುವ ಸಮುದಾಯ ಹೊಸ ವರ್ಷ ಸಗವಾಗತಿಸುವುದಕ್ಕೆ ಹೊಸ ಹುರುಪಿನಿಂದ ಕಾದು ಕುಳಿತಿದ್ದರು. ಬೆಂಗಳೂರಿನಲ್ಲಂತು ಬ್ರಿಗೇಡ್ ರೋಡ್ ಭರ್ತಿಯಾಗಿತ್ತು. ಮದ್ಯರಾತ್ರಿಯವರೆಗೂ ಪಾರ್ಟಿ ಮಾಡಿ, ಎಂಜಾಯ್ ಮಾಡಿದರು. ಪೊಲೀಸರು ಕೂಡ ಇಂಥ ಪರಿಸ್ಥಿತಿಯನ್ನು ಚೆನ್ನಾಗಿ ನಿಭಾಯಿಸಿದ್ದಾರೆ. ಯಾರಿಗೂ ಸ್ವಲ್ಪವೂ ತೊಂದರೆಯಾಗದಂತೆ ಎಚ್ಚರವಹಿಸಿ, ಸುರಕ್ಷತೆ ಕಾಪಾಡಿರುವ ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಲೇಬೇಕು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!