Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಲಾ ಶಾಸಕರಿಗೆ 50 ಕೋಟಿ ಆಮಿಷ : ಆಪರೇಷನ್ ಕಮಲದ ಬಗ್ಗೆ ಆಯನೂರು ಮಂಜುನಾಥ್ ಶಾಕಿಂಗ್ ಹೇಳಿಕೆ

Facebook
Twitter
Telegram
WhatsApp

 

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಸಾಕಷ್ಟು ತಯಾರಿ ನಡೆಯುತ್ತಿದೆ. ಇದರ ನಡುವೆ ಆಪರೇಷನ್ ಕಮಲದ ಸದ್ದು ಹಾಗೂ ಆಪರೇಷನ್ ಹಸ್ತದ ಸದ್ದು ಎರಡು ಚರ್ಚೆಯಲ್ಲಿದೆ. ಇದೋಗ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಆಪರೇಷನ್ ಕಮಲದ ಮೂಲಕ ತಲಾ ಶಾಸಕನಿಗೆ ಐವತ್ತು ಕೋಟಿ ಆಫರ್ ಮಾಡಲಾಗಿದೆಯಂತೆ‌.

ಈ ಬಗ್ಗೆ ಮಾತನಾಡಿದ ಆಯನೂರು ಮಂಜುನಾಥ್, ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡು ಹತಾಶೆ ಅನುಭವಿಸುತ್ತಿದ್ದಾರೆ. ಅದಕ್ಕಾಗಿಯೇ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆದ್ ಶಾಸಕರಿಗೆ ಬಿಜೆಪಿಯಿಂದ ಆಮಿಷ ಒಡ್ಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬದ ವ್ಯಕ್ತಿಯೊಬ್ಬರು ಹಾಗೂ ಹಾಲಿ ಶಾಸಕರೊಬ್ಬರು ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆ ಎಂದಿದ್ದಾರೆ.

ಸರ್ಕಾರ ಬೀಳಿಸುವ ಸಾಮರ್ಥ್ಯ ಈಶ್ವರಪ್ಪ ಅವರಿಗೆ ಇಲ್ಲ. ಈಶ್ವರಪ್ಪ ಪ್ರಭಾವ ಎಲ್ಲೂ ಇಲ್ಲ. ಸರ್ಕಾರ ಬೀಳಿಸುವ ಅಮೃತ ವಾಕ್ಯವನ್ನು ಹೇಳಿದ್ದಾರೆ. ಅವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಅವರೊಬ್ಬ ಅಪ್ರಬುದ್ಧ ರಾಜಕಾರಣಿ. ಬಿಜೆಪಿಗೆ ನಷ್ಟವಾಗಿರುವುದರಿಂದ ಅವರನ್ನು ಬಿಜೆಪಿಯಿಂದ ಹೊರಗೆ ಇಡಲಾಗಿದೆ. ಈಶ್ವರಪ್ಪ ಅವರಿಗೆ ಮಾತನಾಡುವ ಬಾಯಿ ಚಪಲವಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇಲ್ಲ. ಈಶ್ವರಪ್ಪ ಅವರನ್ನು ಯಾವ ಗುತ್ತಿಗೆದಾರ ಬಂದು ಭೇಟಿಯಾಗಿದ್ದು..? ಈಶ್ವರಪ್ಪ ಸಚಿವರಾಗಿದ್ದಾಗ ದುಡ್ಡು ದೋಚಿದ್ದು ಬಿಟ್ಟರೆ ಬೇರೆ ಏನು ಮಾಡಿಲ್ಲ. ಈಶ್ವರಪ್ಪ ಅವರದ್ದು ಹರಕು ಬಾಯಿ. ಅವರ ಯಾವ ಮಾತನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ. ಬಿಎಸ್ವೈ ವಿರುದ್ಧವೇ ನಿರಂತರವಾಗಿ ಪಿತೂರಿ ಮಾಡಿದ್ದಾರೆ ಎಂದು ಈಶ್ವರಪ್ಪ ವಿರುದ್ಧ ಆಯನೂರು ಮಂಜುನಾಥ್ ಗರಂ ಆಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!