Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಲಾ ಶಾಸಕರಿಗೆ 50 ಕೋಟಿ ಆಮಿಷ : ಆಪರೇಷನ್ ಕಮಲದ ಬಗ್ಗೆ ಆಯನೂರು ಮಂಜುನಾಥ್ ಶಾಕಿಂಗ್ ಹೇಳಿಕೆ

---Advertisement---

 

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಸಾಕಷ್ಟು ತಯಾರಿ ನಡೆಯುತ್ತಿದೆ. ಇದರ ನಡುವೆ ಆಪರೇಷನ್ ಕಮಲದ ಸದ್ದು ಹಾಗೂ ಆಪರೇಷನ್ ಹಸ್ತದ ಸದ್ದು ಎರಡು ಚರ್ಚೆಯಲ್ಲಿದೆ. ಇದೋಗ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಆಪರೇಷನ್ ಕಮಲದ ಮೂಲಕ ತಲಾ ಶಾಸಕನಿಗೆ ಐವತ್ತು ಕೋಟಿ ಆಫರ್ ಮಾಡಲಾಗಿದೆಯಂತೆ‌.

ಈ ಬಗ್ಗೆ ಮಾತನಾಡಿದ ಆಯನೂರು ಮಂಜುನಾಥ್, ಬಿಜೆಪಿ ನಾಯಕರು ಅಧಿಕಾರ ಕಳೆದುಕೊಂಡು ಹತಾಶೆ ಅನುಭವಿಸುತ್ತಿದ್ದಾರೆ. ಅದಕ್ಕಾಗಿಯೇ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆದ್ ಶಾಸಕರಿಗೆ ಬಿಜೆಪಿಯಿಂದ ಆಮಿಷ ಒಡ್ಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬದ ವ್ಯಕ್ತಿಯೊಬ್ಬರು ಹಾಗೂ ಹಾಲಿ ಶಾಸಕರೊಬ್ಬರು ಆಪರೇಷನ್ ಕಮಲಕ್ಕೆ ಮುಂದಾಗಿದ್ದಾರೆ ಎಂದಿದ್ದಾರೆ.

ಸರ್ಕಾರ ಬೀಳಿಸುವ ಸಾಮರ್ಥ್ಯ ಈಶ್ವರಪ್ಪ ಅವರಿಗೆ ಇಲ್ಲ. ಈಶ್ವರಪ್ಪ ಪ್ರಭಾವ ಎಲ್ಲೂ ಇಲ್ಲ. ಸರ್ಕಾರ ಬೀಳಿಸುವ ಅಮೃತ ವಾಕ್ಯವನ್ನು ಹೇಳಿದ್ದಾರೆ. ಅವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಅವರೊಬ್ಬ ಅಪ್ರಬುದ್ಧ ರಾಜಕಾರಣಿ. ಬಿಜೆಪಿಗೆ ನಷ್ಟವಾಗಿರುವುದರಿಂದ ಅವರನ್ನು ಬಿಜೆಪಿಯಿಂದ ಹೊರಗೆ ಇಡಲಾಗಿದೆ. ಈಶ್ವರಪ್ಪ ಅವರಿಗೆ ಮಾತನಾಡುವ ಬಾಯಿ ಚಪಲವಿದೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇಲ್ಲ. ಈಶ್ವರಪ್ಪ ಅವರನ್ನು ಯಾವ ಗುತ್ತಿಗೆದಾರ ಬಂದು ಭೇಟಿಯಾಗಿದ್ದು..? ಈಶ್ವರಪ್ಪ ಸಚಿವರಾಗಿದ್ದಾಗ ದುಡ್ಡು ದೋಚಿದ್ದು ಬಿಟ್ಟರೆ ಬೇರೆ ಏನು ಮಾಡಿಲ್ಲ. ಈಶ್ವರಪ್ಪ ಅವರದ್ದು ಹರಕು ಬಾಯಿ. ಅವರ ಯಾವ ಮಾತನ್ನು ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ. ಬಿಎಸ್ವೈ ವಿರುದ್ಧವೇ ನಿರಂತರವಾಗಿ ಪಿತೂರಿ ಮಾಡಿದ್ದಾರೆ ಎಂದು ಈಶ್ವರಪ್ಪ ವಿರುದ್ಧ ಆಯನೂರು ಮಂಜುನಾಥ್ ಗರಂ ಆಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಗ್ರಾಮೀಣ ಜನತೆಗೆ ಸಿಹಿ ಸುದ್ದಿ: ಮನೆಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ‘ಒಸಿ’ ವಿನಾಯಿತಿ ನೀಡಿ ಸರ್ಕಾರ ಆದೇಶ

ಮೋದಿ ಸರ್ಕಾರಕ್ಕೆ 12 ವರ್ಷ ಪೂರ್ಣ: ಚಿತ್ರದುರ್ಗದ ನೀಲಕಂಠೇಶ್ವರ ಸನ್ನಿಧಿಯಲ್ಲಿ ನಮೋ ಹೆಸರಲ್ಲಿ ವಿಶೇಷ ಪೂಜೆ

ದೇಹದ ಸದೃಢತೆಗೆ ಸಸ್ಯಾಹಾರಿಗಳು ಸೇವಿಸಬೇಕಾದ ಪ್ರೋಟೀನ್ ಯುಕ್ತ ಆಹಾರಗಳಿವು

ವಿಶ್ವ ನಾಯಕ ನರೇಂದ್ರ ಮೋದಿಯವರ 12 ವರ್ಷಗಳ ಸೇವೆಗೆ ಬಿಜೆಪಿ ಕಾರ್ಯಕರ್ತರಿಂದ ಸಿಹಿ ಹಂಚಿ ಸಂಭ್ರಮ

ಜೂನ್ 21ರಂದು ಕೋಟೆನಾಡಿನಲ್ಲಿ 12ನೇ ಅಂತರರಾಷ್ಟೀಯ ಯೋಗ ದಿನಾಚರಣೆ : ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಒತ್ತಡ ಮುಕ್ತ ಜೀವನಕ್ಕೆ ಯೋಗ ಪ್ರಸ್ತುತ

ಗಣಿಬಾಧಿತ ಗ್ರಾಮಗಳ ಸ್ವಸಹಾಯ ಗುಂಪಿನ ಮಹಿಳೆಯರಿಗೆ ಹೈನುರಾಸು ಕಾರ್ಯಕ್ರಮದಡಿ ಆರ್ಥಿಕ ನೆರವು : ಜೂನ್ 22 ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Leave a Comment